September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು.

ಭಾರತೀಯ ಜೆಸಿಐ ಸಂಸ್ಥೆಯು ಜೇಸಿಐ ಇಂಡಿಯಾ ಪೌಂಡೇಶನ್ ಎಂಬ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುತ್ತದೆ. ಯುವ ಜನರಿಗೆ ವಿವಿಧ ತರಬೇತಿ, ಕಲ್ಯಾಣ ಕಾರ್ಯಕ್ರಮಗಳಿಗೆ ಸಾಕಷ್ಟು ಸಹಾಯ ವಿತರಿಸುತ್ತಿದೆ.

ಕೊಕ್ಕಡ ಘಟಕವು ಶಿಫಾರಸು ಮಾಡಿದ ನಿರೀಕ್ಷಾ, ಶ್ರಾವ್ಯ, ಅನನ್ಯ, ಶಿಲ್ಪಾ, ನಿಶಿತಾ, ಸುಮಾ, ಅಕ್ಷಯ್, ಮಾನ್ಯತಾ, ಹರ್ಷಿತಾ, ಯೋಗಿತಾ, ಶಿವಾನಂದ, ಪ್ರವೀಕ್ಷಾ, ಪವಿತ್ರ ಹಾಗೂ ದೀಕ್ಷಿತಾ ಇವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಯಿತು.

ಕೊಕ್ಕಡ ಜೇಸಿ ಸಂಸ್ಥೆಯ ಸದಸ್ಯರಾದ ಕೆ. ಶ್ರೀಧರ ರಾವ್ ಹಾಗೂ ಶ್ರೀಮತಿ ಜೆಸಿಂತಾ ಡಿ ಸೋಜ ಅವರು 2023 ನೇ ಸಾಲಿನಲ್ಲಿ ಜೇಸಿ ಪ್ರತಿಷ್ಠಾನಕ್ಕೆ ದಾನ ಕೊಡುವ ಮೂಲಕ ಬೆಂಬಲಿಸಿದ್ದಾರೆ.

ಈ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಮಾರ್ಗದರ್ಶನ ನೀಡಿದ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಹಾಗೂ ವಲಯಾಡಳಿತ ಮಂಡಳಿ, ಶಾಲಾ ಕಾಲೇಜುಗಳ ಮುಖ್ಯಸ್ಥರ ನೆರವಿಗೆ ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್ ಕಂಡೀಷನಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಬಳಂಜ:ಎಲ್ಯೊಟ್ಟು ನಲ್ಲಿ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ

Suddi Udaya
error: Content is protected !!