22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಕೊಕ್ಕಡ: ಜೇಸಿ ಕೊಕ್ಕಡ ಕಪಿಲಾ ಘಟಕದ ವತಿಯಿಂದ 2023 ನೇ ಸಾಲಿನಲ್ಲಿ 14 ಮಂದಿ ವಿದ್ಯಾರ್ಥಿಗಳಿಗೆ ತಲಾ ಮೂರು ಸಾವಿರ ರೂಪಾಯಿಗಳಂತೆ ಒಟ್ಟು 42,000 ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ನೀಡಲಾಯಿತು.

ಭಾರತೀಯ ಜೆಸಿಐ ಸಂಸ್ಥೆಯು ಜೇಸಿಐ ಇಂಡಿಯಾ ಪೌಂಡೇಶನ್ ಎಂಬ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಸ್ಕಾಲರ್ ಶಿಪ್ ನೀಡುತ್ತದೆ. ಯುವ ಜನರಿಗೆ ವಿವಿಧ ತರಬೇತಿ, ಕಲ್ಯಾಣ ಕಾರ್ಯಕ್ರಮಗಳಿಗೆ ಸಾಕಷ್ಟು ಸಹಾಯ ವಿತರಿಸುತ್ತಿದೆ.

ಕೊಕ್ಕಡ ಘಟಕವು ಶಿಫಾರಸು ಮಾಡಿದ ನಿರೀಕ್ಷಾ, ಶ್ರಾವ್ಯ, ಅನನ್ಯ, ಶಿಲ್ಪಾ, ನಿಶಿತಾ, ಸುಮಾ, ಅಕ್ಷಯ್, ಮಾನ್ಯತಾ, ಹರ್ಷಿತಾ, ಯೋಗಿತಾ, ಶಿವಾನಂದ, ಪ್ರವೀಕ್ಷಾ, ಪವಿತ್ರ ಹಾಗೂ ದೀಕ್ಷಿತಾ ಇವರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಯಿತು.

ಕೊಕ್ಕಡ ಜೇಸಿ ಸಂಸ್ಥೆಯ ಸದಸ್ಯರಾದ ಕೆ. ಶ್ರೀಧರ ರಾವ್ ಹಾಗೂ ಶ್ರೀಮತಿ ಜೆಸಿಂತಾ ಡಿ ಸೋಜ ಅವರು 2023 ನೇ ಸಾಲಿನಲ್ಲಿ ಜೇಸಿ ಪ್ರತಿಷ್ಠಾನಕ್ಕೆ ದಾನ ಕೊಡುವ ಮೂಲಕ ಬೆಂಬಲಿಸಿದ್ದಾರೆ.

ಈ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಮಾರ್ಗದರ್ಶನ ನೀಡಿದ ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಹಾಗೂ ವಲಯಾಡಳಿತ ಮಂಡಳಿ, ಶಾಲಾ ಕಾಲೇಜುಗಳ ಮುಖ್ಯಸ್ಥರ ನೆರವಿಗೆ ಘಟಕಾಧ್ಯಕ್ಷ ಜಿತೇಶ್ ಎಲ್. ಪಿರೇರಾ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Related posts

ಶಿರ್ಲಾಲು ಪೇಟೆಯಲ್ಲಿ ಕಾಣಿಸಿಕೊಂಡ ಚಿರತೆ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಸಾಮಾಜಿಕ ಪರಿಶೋಧನೆ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya
error: Content is protected !!