September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

ಉಜಿರೆ: ಭಿತ್ತಿಪತ್ರಿಕೆಗಳಿಂದ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಚಾರಗಳ ಕುರಿತು ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಆಶಯ ವ್ಯಕ್ತಪಡಿಸಿದರು.
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.11 ರಂದು ‘ವನಿತೆ’ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಅವರು ಮಾತನಾಡಿದರು.


“ಭಿತ್ತಿಪತ್ರಿಕೆಯಲ್ಲಿರುವ ಮಾಹಿತಿ ನಮ್ಮ ಸ್ವಂತದ್ದಾಗಿದ್ದು, ಚಿಕ್ಕದಾಗಿ ಇರಬೇಕು. ನೋಡಿದ ಕೂಡಲೇ ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಹೇಳುವಂತಿರಬೇಕು” ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಯರು ತಯಾರಿಸಿದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದ ಅವರು, ಅವುಗಳ ಬಗ್ಗೆ ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜನರಿಗೆ ಸ್ವೋದ್ಯೋಗಕ್ಕೆ ನೆರವಾಗುವ ಬಗ್ಗೆ ಸಲಹೆ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಅವರು ಮಾತನಾಡಿ, “ಭಿತ್ತಿಪತ್ರಿಕೆಯ ಮೂಲಕ ಆರಂಭವಾದ ಈ ಬರವಣಿಗೆ ಮುಂದೆ ನಿಮ್ಮ ಪ್ರತಿಭೆಯನ್ನು ಸಮಾಜ ಗುರುತಿಸುವಂತೆ ಮಾಡಲಿ. ಇದರಿಂದ ಸಂಸ್ಥೆಗೆ ಶುಭವಾಗಲಿ” ಎಂದು ಹಾರೈಸಿದರು.


ಉತ್ತಮ ಭಿತ್ತಿಪತ್ರಿಕೆ ರಚಿಸಿದ ಎರಡು ತಂಡಗಳಿಗೆ ಪ್ರಥಮ, ದ್ವಿತೀಯ ಬಹುಮಾನ ವಿತರಿಸಲಾಯಿತು.
ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.

Related posts

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಶ್ರೀ ಧ.ಮಂ. ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಬಾಷ್ (BOSCH) ಆಟೋಮೋಟಿವ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯಿಂದ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಔದ್ಯೋಗಿಕ ನೇರ ಸಂದರ್ಶನ

Suddi Udaya
error: Content is protected !!