September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

ತೆಂಕಕಾರಂದೂರು: ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಬಿಳ್ಕೋಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಗ್ರಾಮ ಪಂಚಾಯತ್ ಸದಸ್ಯ ನಿಜಾಮ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜನ ಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲಿಯಾನ್, ಬಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಅಳದಂಗಡಿ ಪ್ರಾ. ಕೃ. ಪ. ಸಂಘ ದ ನಿರ್ದೇಶಕರಾದ ಜಿನ್ನಪ್ಪ ಪೂಜಾರಿ ಕಾಪಿನಡ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಗುಲಾಬಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಲೀಲಾವತಿ, ಶ್ರೀಮತಿ ಪ್ರಸನ್ನ, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಾಂತಿ ವಹಿಸಿದ್ದರು.

ಈ ಸಂದರ್ಭದಲ್ಲಿ ಗಾಂಧಿ ಗ್ರಾಮ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ನ ಪರವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ರವನ್ನು ಸನ್ಮಾನಿಸಲಾಯಿತು.ನಿವೃತ್ತ ಅಂಚೆ ಪಾಲಕ ನಾರಾಯಣ ಗೌಡ ರವರು ಅನಿಸಿಕೆ ವ್ಯಕ್ತ ಪಡಿಸಿದರು,ಸ್ವಾಗತ್ ಫ್ರೆಂಡ್ಸ್ ನ ಮುಂದಾಳು ಮುಸ್ತಫ ಮಂಜೊಟ್ಟಿ, ಬಾಲ ವಿಕಾಸ ಸಮಿತಿ ಸರ್ವ ಸದಸ್ಯರು, ತೆಂಕಕಾರಂದರು ಸ್ತ್ರೀ ಶಕ್ತಿ ಸಂಘದ ಸದಸ್ಯರು,ಮಕ್ಕಳ ಪೋಷಕರು, ಊರಿನ ಸಮಸ್ತ ಜನರು, ಅಂಗನವಾಡಿ ಕೇಂದ್ರ ದ ಸಹಾಯಕಿ ಶ್ರೀಮತಿ ಲಿಲ್ಲಿ, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು, ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಾಂತಿ ಇವರು ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಯನ್ನು ಉಡುಗೊರೆಯಾಗಿ ಕೊಡುಗೆ ನೀಡಿದರು. ಕಾರ್ಯಕ್ರಮವನ್ನು ಕಾಪಿನಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸುಂದರಾ ನಿರೂಪಿಸಿ, ತೆಂಕಕಾರಂದೂರು ಅಂಗನವಾಡಿ ಕಾರ್ಯ ಕರ್ತೆ ಶ್ರೀಮತಿ ಸ್ಫೂರ್ತಿ. ಎಸ್. ಸ್ವಾಗತಿಸಿ ಧನ್ಯವಾದವಿತ್ತರು.

Related posts

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಪೂರ್ವಭಾವಿ ಸಭೆ:ನೂತನ ಸಮಿತಿ ಅಧ್ಯಕ್ಷರಾಗಿ ರವಿಶಂಕರ್ ಶೆಟ್ಟಿ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾನ್ಯತೆ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya
error: Content is protected !!