25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

ಬೆಳ್ತಂಗಡಿ : ನೆರಿಯ ಗ್ರಾಮದ ಅಣಿಯೂರು ಕೋಲೋಡಿ ಮತ್ತು ಪುಲ್ಲಾಜೆ ,ಕೋಲ್ನ ಎಂಬ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಆಗದೇ ನೂರಾರು ಕುಟುಂಬಗಳು ಮಳೆ ವೇಳೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಪಂಚಾಯತ್ ಆಡಳಿತ ಸ್ಪಂದಿಸಿಲ್ಲ ಎಂದು ಆರೋಪಿಸಿದ ನಾಗರಿಕರು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದ ಘಟನೆ ವರದಿಯಾಗಿದೆ.

ಅ.11ರಂದು ನೆರಿಯ ಪುಲ್ಲಾಜೆ ಯುವಕ ಬೈಕಿನಲ್ಲಿ ಹೊಳೆ ದಾಟುತ್ತಿರುವ ವೇಳೆಯಲ್ಲಿ ನೀರಿನಲ್ಲಿ ಸಿಲುಕಿಕೊಂಡು ಕೊಚ್ಚಿಕೊಂಡು ಹೋಗುವ ಪರಿಸ್ಥಿತಿಯಲ್ಲಿದ್ದು ಇದನ್ನು ತಿಳಿದ ಸ್ಥಳೀಯರು ಯುವಕನನ್ನು ಅಪಾಯದಿಂದ ಪಾರು ಮಾಡಿದ್ದರು.ಇದನ್ನು ತಿಳಿದ ಸ್ಥಳೀಯರು ತಕ್ಷಣ ಪಂಚಾಯಿತಿ ಅಧ್ಯಕ್ಷೆ ವಸಂತಿಯವರಿಗೆ ಸೇತುವೆ ನಿರ್ಮಿಸಲು ಮನವಿ ಮಾಡಿದ್ದರು. ಇದಕ್ಕೆ ಅಧ್ಯಕ್ಷೆ ಸರಿಯಾಗಿ ಉತ್ತರಿಸಲಿಲ್ಲ ಎಂಬ ಕಾರಣಕ್ಕೆ ಅ.12 ರಂದು ಸಂಜೆ ಪಂಚಾಯಿತಿ ಮುಂಭಾಗ ಊರಿನವರು, ಏಕಾಏಕಿ ಪ್ರತಿಭಟನೆ ನಡೆಸಿ ತಕ್ಷಣ ಸೇತುವೆ ನಿರ್ಮಿಸುವ ಬಗ್ಗೆ ಪಂಚಾಯತಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯು ರಾತ್ರಿ 8ಗಂಟೆವರೆಗೂ ಮುಂದುವರಿದು, ಸ್ಥಳಕ್ಕೆ ಗ್ರಾ.ಪಂಅಧ್ಯಕ್ಷೆ ವಸಂತಿ ಹಾಗೂ ಧರ್ಮಸ್ಥಳದ ಪೊಲೀಸ್ ಠಾಣೆಯ ಪಿಎಸ್ ಐ ಅನಿಲ್ ಕುಮಾರ್ ಹಾಗೂ ಸಿಬ್ಬಂದಿ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಭಟನೆ ಕೊನೆಗೊಂಡಿತು. ವೈಯಕ್ತಿಕ ಕೆಲಸದ ಹಿನ್ನೆಲೆಯಲ್ಲಿ ಗುರುವಾರ ಗ್ರಾಮದಿಂದ ಹೊರಗಡೆ ಇದ್ದ ವೇಳೆ ದೂರವಾಣಿ ಕರೆ ಬಂದಿದ್ದು, ಈ ಬಗ್ಗೆ ಹಿಂದಿರುಗಿ ಬಂದ ಬಳಿಕ ಮಾತನಾಡುವುದಾಗಿ ತಿಳಿಸಿದ್ದೆ. ಕೆಲವರು ಅದಾಗಲೇ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಧರ್ಮಸ್ಥಳ ಪೊಲೀಸರು ಆಗಮಿಸಿ ಮಾತುಕತೆ ನಡೆಸಿದಾ ಬಳಿಕ ಪ್ರತಿಭಟನೆ ಹಿಂದೆಗೆದು ಕೊಳ್ಳಲಾಯಿತು ಸದ್ಯ ಸೇತುವೆ ನಿರ್ಮಾಣವಾಗಬೇಕಾದ ಸ್ಥಳದಲ್ಲಿ ಚರಲ್ ಹಾಕಿ ಪಂಚಾಯಿತಿ ವತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಿಕೊಡಲಾಗುವುದು. ಜಿಲ್ಲಾ ಪಂಚಾಯತಿ ಇಂಜಿನಿಯರ್ ಅವರನ್ನು ಕರೆಯಿಸಿ ಇಲ್ಲಿ ಸೇತುವೆ ನಿರ್ಮಾಣಕ್ಕೆ ತಗಲಬಹುದಾದ ಅಂದಾಜು ವೆಚ್ಚದ ಕುರಿತು ಪರಿಶೀಲಿಸಿ, ಇದು ಪಂಚಾಯಿತಿಯ ಸೀಮಿತ ಅನುದಾನದಲ್ಲಿ ನಿರ್ಮಿಸುವ ಹಾಗಿದ್ದಲ್ಲಿ ಪಂಚಾಯಿತಿ ವತಿಯಿಂದ ಸೇತುವೆ ನಿರ್ಮಿಸಲಾಗುವುದು. ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕಿನ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸೇತುವೆ ನಿರ್ಮಿಸಿ ಕೊಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಸಂತಿ ತಿಳಿಸಿದ್ದಾರೆ.

Related posts

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಪಡಂಗಡಿ: ಹಿರಿಯ ನಾಗರಿಕ ಧರ್ಣಪ್ಪ ಶೆಟ್ಟಿ ಯವರಿಂದ ಮತ ಚಲಾವಣೆ

Suddi Udaya

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ತಿರುವನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ

Suddi Udaya
error: Content is protected !!