April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

ಉಜಿರೆ: ಭಿತ್ತಿಪತ್ರಿಕೆಗಳಿಂದ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಚಾರಗಳ ಕುರಿತು ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಆಶಯ ವ್ಯಕ್ತಪಡಿಸಿದರು.
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.11 ರಂದು ‘ವನಿತೆ’ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಅವರು ಮಾತನಾಡಿದರು.


“ಭಿತ್ತಿಪತ್ರಿಕೆಯಲ್ಲಿರುವ ಮಾಹಿತಿ ನಮ್ಮ ಸ್ವಂತದ್ದಾಗಿದ್ದು, ಚಿಕ್ಕದಾಗಿ ಇರಬೇಕು. ನೋಡಿದ ಕೂಡಲೇ ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಹೇಳುವಂತಿರಬೇಕು” ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಯರು ತಯಾರಿಸಿದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದ ಅವರು, ಅವುಗಳ ಬಗ್ಗೆ ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜನರಿಗೆ ಸ್ವೋದ್ಯೋಗಕ್ಕೆ ನೆರವಾಗುವ ಬಗ್ಗೆ ಸಲಹೆ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಅವರು ಮಾತನಾಡಿ, “ಭಿತ್ತಿಪತ್ರಿಕೆಯ ಮೂಲಕ ಆರಂಭವಾದ ಈ ಬರವಣಿಗೆ ಮುಂದೆ ನಿಮ್ಮ ಪ್ರತಿಭೆಯನ್ನು ಸಮಾಜ ಗುರುತಿಸುವಂತೆ ಮಾಡಲಿ. ಇದರಿಂದ ಸಂಸ್ಥೆಗೆ ಶುಭವಾಗಲಿ” ಎಂದು ಹಾರೈಸಿದರು.


ಉತ್ತಮ ಭಿತ್ತಿಪತ್ರಿಕೆ ರಚಿಸಿದ ಎರಡು ತಂಡಗಳಿಗೆ ಪ್ರಥಮ, ದ್ವಿತೀಯ ಬಹುಮಾನ ವಿತರಿಸಲಾಯಿತು.
ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರೋತ್ಸವದ ಕಾರ್ಯಾಧ್ಯಕ್ಷರಾಗಿ ಶೈಲೇಂದ್ರ ಸುವರ್ಣ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya
error: Content is protected !!