25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

ಉಜಿರೆ: ಭಿತ್ತಿಪತ್ರಿಕೆಗಳಿಂದ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಚಾರಗಳ ಕುರಿತು ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಆಶಯ ವ್ಯಕ್ತಪಡಿಸಿದರು.
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.11 ರಂದು ‘ವನಿತೆ’ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಅವರು ಮಾತನಾಡಿದರು.


“ಭಿತ್ತಿಪತ್ರಿಕೆಯಲ್ಲಿರುವ ಮಾಹಿತಿ ನಮ್ಮ ಸ್ವಂತದ್ದಾಗಿದ್ದು, ಚಿಕ್ಕದಾಗಿ ಇರಬೇಕು. ನೋಡಿದ ಕೂಡಲೇ ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಹೇಳುವಂತಿರಬೇಕು” ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಯರು ತಯಾರಿಸಿದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದ ಅವರು, ಅವುಗಳ ಬಗ್ಗೆ ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜನರಿಗೆ ಸ್ವೋದ್ಯೋಗಕ್ಕೆ ನೆರವಾಗುವ ಬಗ್ಗೆ ಸಲಹೆ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಅವರು ಮಾತನಾಡಿ, “ಭಿತ್ತಿಪತ್ರಿಕೆಯ ಮೂಲಕ ಆರಂಭವಾದ ಈ ಬರವಣಿಗೆ ಮುಂದೆ ನಿಮ್ಮ ಪ್ರತಿಭೆಯನ್ನು ಸಮಾಜ ಗುರುತಿಸುವಂತೆ ಮಾಡಲಿ. ಇದರಿಂದ ಸಂಸ್ಥೆಗೆ ಶುಭವಾಗಲಿ” ಎಂದು ಹಾರೈಸಿದರು.


ಉತ್ತಮ ಭಿತ್ತಿಪತ್ರಿಕೆ ರಚಿಸಿದ ಎರಡು ತಂಡಗಳಿಗೆ ಪ್ರಥಮ, ದ್ವಿತೀಯ ಬಹುಮಾನ ವಿತರಿಸಲಾಯಿತು.
ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಹಿಂದೂ ಜನಜಾಗೃತಿ ಸಮಿತಿಯಿಂದ ಹಿಂದೂ ರಾಷ್ಟ್ರ ಸ್ಥಾಪನೆಗೆ ಕರೆ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಬಹರೈನ್, ದುಬೈಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 169 ನೇ ಜಯಂತಿಯಲ್ಲಿ ಬ್ರಹ್ಮಾನಂದ ಶ್ರೀಗಳಿಂದ ಆಶೀರ್ವಚನ

Suddi Udaya

ಅಳದಂಗಡಿಯಲ್ಲಿ ನೊಚ್ಚ ಹಾರ್ಡ್‌ವೇರ್ ಮತ್ತು ಸ್ಯಾನಿಟರಿ ಶುಭಾರಂಭ

Suddi Udaya
error: Content is protected !!