23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

ತೆಂಕಕಾರಂದೂರು: ಅಂಗನವಾಡಿ ಕೇಂದ್ರದಲ್ಲಿ ಸುಮಾರು 37 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಶ್ರೀಮತಿ ಶಾಂತಿ ಇವರಿಗೆ ತೆಂಕಕಾರಂದೂರು ಗ್ರಾಮಸ್ಥರ ಪರವಾಗಿ ಬಿಳ್ಕೋಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಗ್ರಾಮ ಪಂಚಾಯತ್ ಸದಸ್ಯ ನಿಜಾಮ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಜನ ಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಕೆ ವಸಂತ ಸಾಲಿಯಾನ್, ಬಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಅಳದಂಗಡಿ ಪ್ರಾ. ಕೃ. ಪ. ಸಂಘ ದ ನಿರ್ದೇಶಕರಾದ ಜಿನ್ನಪ್ಪ ಪೂಜಾರಿ ಕಾಪಿನಡ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶ್ರೀಮತಿ ಗುಲಾಬಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಶ್ರೀಮತಿ ಲೀಲಾವತಿ, ಶ್ರೀಮತಿ ಪ್ರಸನ್ನ, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಾಂತಿ ವಹಿಸಿದ್ದರು.

ಈ ಸಂದರ್ಭದಲ್ಲಿ ಗಾಂಧಿ ಗ್ರಾಮ ಪುರಸ್ಕೃತ ಬಳಂಜ ಗ್ರಾಮ ಪಂಚಾಯತ್ ನ ಪರವಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ರವನ್ನು ಸನ್ಮಾನಿಸಲಾಯಿತು.ನಿವೃತ್ತ ಅಂಚೆ ಪಾಲಕ ನಾರಾಯಣ ಗೌಡ ರವರು ಅನಿಸಿಕೆ ವ್ಯಕ್ತ ಪಡಿಸಿದರು,ಸ್ವಾಗತ್ ಫ್ರೆಂಡ್ಸ್ ನ ಮುಂದಾಳು ಮುಸ್ತಫ ಮಂಜೊಟ್ಟಿ, ಬಾಲ ವಿಕಾಸ ಸಮಿತಿ ಸರ್ವ ಸದಸ್ಯರು, ತೆಂಕಕಾರಂದರು ಸ್ತ್ರೀ ಶಕ್ತಿ ಸಂಘದ ಸದಸ್ಯರು,ಮಕ್ಕಳ ಪೋಷಕರು, ಊರಿನ ಸಮಸ್ತ ಜನರು, ಅಂಗನವಾಡಿ ಕೇಂದ್ರ ದ ಸಹಾಯಕಿ ಶ್ರೀಮತಿ ಲಿಲ್ಲಿ, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು, ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಾಂತಿ ಇವರು ಅಂಗನವಾಡಿ ಕೇಂದ್ರಕ್ಕೆ ಮಿಕ್ಸಿ ಯನ್ನು ಉಡುಗೊರೆಯಾಗಿ ಕೊಡುಗೆ ನೀಡಿದರು. ಕಾರ್ಯಕ್ರಮವನ್ನು ಕಾಪಿನಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಸುಂದರಾ ನಿರೂಪಿಸಿ, ತೆಂಕಕಾರಂದೂರು ಅಂಗನವಾಡಿ ಕಾರ್ಯ ಕರ್ತೆ ಶ್ರೀಮತಿ ಸ್ಫೂರ್ತಿ. ಎಸ್. ಸ್ವಾಗತಿಸಿ ಧನ್ಯವಾದವಿತ್ತರು.

Related posts

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya
error: Content is protected !!