September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಭಿತ್ತಿ ಪತ್ರಿಕೆ ಅನಾವರಣ

ಉಜಿರೆ: ಭಿತ್ತಿಪತ್ರಿಕೆಗಳಿಂದ ನೈಸರ್ಗಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ವಿಚಾರಗಳ ಕುರಿತು ಆಸಕ್ತಿ ಮೂಡಿಸುವ ಕೆಲಸ ಆಗಬೇಕು ಎಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುನಿಲ್ ಹೆಗ್ಡೆ ಆಶಯ ವ್ಯಕ್ತಪಡಿಸಿದರು.
ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ.11 ರಂದು ‘ವನಿತೆ’ ಭಿತ್ತಿಪತ್ರಿಕೆ ಅನಾವರಣಗೊಳಿಸಿ ಅವರು ಮಾತನಾಡಿದರು.


“ಭಿತ್ತಿಪತ್ರಿಕೆಯಲ್ಲಿರುವ ಮಾಹಿತಿ ನಮ್ಮ ಸ್ವಂತದ್ದಾಗಿದ್ದು, ಚಿಕ್ಕದಾಗಿ ಇರಬೇಕು. ನೋಡಿದ ಕೂಡಲೇ ಅದು ಏನನ್ನು ಸೂಚಿಸುತ್ತದೆ ಎಂಬುದನ್ನು ಹೇಳುವಂತಿರಬೇಕು” ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಯರು ತಯಾರಿಸಿದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿದ ಅವರು, ಅವುಗಳ ಬಗ್ಗೆ ಯೂಟ್ಯೂಬ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಜನರಿಗೆ ಸ್ವೋದ್ಯೋಗಕ್ಕೆ ನೆರವಾಗುವ ಬಗ್ಗೆ ಸಲಹೆ ನೀಡಿದರು.

ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಅವರು ಮಾತನಾಡಿ, “ಭಿತ್ತಿಪತ್ರಿಕೆಯ ಮೂಲಕ ಆರಂಭವಾದ ಈ ಬರವಣಿಗೆ ಮುಂದೆ ನಿಮ್ಮ ಪ್ರತಿಭೆಯನ್ನು ಸಮಾಜ ಗುರುತಿಸುವಂತೆ ಮಾಡಲಿ. ಇದರಿಂದ ಸಂಸ್ಥೆಗೆ ಶುಭವಾಗಲಿ” ಎಂದು ಹಾರೈಸಿದರು.


ಉತ್ತಮ ಭಿತ್ತಿಪತ್ರಿಕೆ ರಚಿಸಿದ ಎರಡು ತಂಡಗಳಿಗೆ ಪ್ರಥಮ, ದ್ವಿತೀಯ ಬಹುಮಾನ ವಿತರಿಸಲಾಯಿತು.
ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.

Related posts

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಗಾಳಿ-ಮಳೆ: ಬೃಹತ್ ಮರ ಉರುಳಿ ಬಿದ್ದು, ಅಡಕೆ ಗಿಡಗಳು ಧರಾಶಾಹಿ

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ. 1 ಕೋಟಿ ಲಾಭ, ಶೇ. 12 ಡಿವಿಡೆಂಡ್

Suddi Udaya

ಎಸ್ ಪಿ ವೈ ಎಸ್ ಎಸ್ ನಿಂದ ಮಾತೃವಂದನ, ಮಾತೃಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya
error: Content is protected !!