ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯಿಂದ ಕಾಪಿನಡ್ಕ ಎಂಬಲ್ಲಿಗೆ ಬೈಕ್ ನಲ್ಕಿ ಸವಾರಿಬ್ಬರು ಪ್ರಯಾಣಿಸುತ್ತಿದ್ದಾಗ ಬೈಕ್ ಸ್ಕಿಡ್ ಆದಂತಹ ಘಟನೆ ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಅ.12 ರಂದು ಪ್ರಕರಣ ದಾಖಲಾಗಿದೆ

ಬೆಳ್ತಂಗಡಿ ನಿವಾಸಿ ದಿವಾಕರ ಎ (52) ಎಂಬವರ ದೂರಿನಂತೆ, ಅ. 10 ರಂದು ದಿವಾಕರವರು ಪರಿಚಯದ ರಾಜು ಶೆಟ್ಟಿ ಎಂಬವರ ಬಾಬ್ತು ಮೋಟಾರ್ ಸೈಕಲ್ ನಂಬ್ರ ಕೆಎ 21 W 6936 ನೇ ರಲ್ಲಿ ಸಹ ಸವಾರನಾಗಿ ಕುಳಿತುಕೊಂಡು ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಎಂಬಲ್ಲಿಗೆ ಪ್ರಯಾಣಿಸುತ್ತಿದ್ದಾಗ ಸವಾರ ರಾಜು ಶೆಟ್ಟಿರವರು ತನ್ನ ಮೋಟಾರ್ ಸೈಕಲ್‌ನ್ನು ಚಲಾಯಿಸುವಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಇಬ್ಬರಿಗೂ ಗಾಯಗಳಾಗಿದೆ.ಆಗ ಸ್ಥಳದಲ್ಲಿದ್ದ ಸಾರ್ವಜನಿಕರು ಗಾಯಾಳುಗಳನ್ಬು ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ದಾಖಲಿಸಿರುತ್ತಾರೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!