September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

ಬೆಳ್ತಂಗಡಿ: ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯು ಅಂಬೇಡ್ಕರ್ ಭವನ, ಬೆಳ್ತಂಗಡಿಯಲ್ಲಿ ಅ.12 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಜೋನ್ ಬ್ಯಾಪಿಸ್ಟ್ ಡಿಸೋಜ ಅವರು ಮಾತಾಡಿ ಪ್ರತೀ ತಿಂಗಳ ಮೂರನೇ ಮಂಗಳವಾರ ನಡೆಯುವ ವಿಕಲಚೇತನರ ಹೊಸ ಗುರುತಿಸುವಿಕೆ ಹಾಗೂ ನವೀಕರಣದ ಶಿಬಿರವನ್ನು ಇನ್ನೂ ಪರಿಣಾಮಕಾರಿಯಾಗಿ ನಡೆಸಲು ಪುನರ್ವಸತಿ ಕಾರ್ಯಕರ್ತರು ಪ್ರತಿ ಮಾಸಿಕ ಕ್ಯಾಂಪ್ ಗಳಲ್ಲಿ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುವ ಬಗ್ಗೆ ವಿವರಣೆ ಹಾಗೂ ಹೊಸ ಪ್ರಕಾರವನ್ನು ತಿಳಿಸಿದರು. ಹಾಗೂ ಪ್ರತಿ ತಿಂಗಳಲ್ಲಿ ನಡೆಸುವ ಶಿಬಿರವು ಇನ್ನೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಎಲ್ಲಾ ರೀತಿಯಲ್ಲಿ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಆಗಲು ಮತ್ತು ಇನ್ನೂ ಪರಿಣಾಮಕಾರಿಯಾಗಿ ಯಶಸ್ವಿ ಆಗಲು ತಾಲ್ಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ 4 ಗುಂಪುಗಳಾಗಿ ವಿಂಗಡಣೆ ಮಾಡಿದ್ದು ಪ್ರತೀ ಗುಂಪಿನಲ್ಲಿ ಒಬ್ಬರನ್ನು ನಾಯಕನಾಗಿ ಮಾಡಿ ಪ್ರತಿ ತಿಂಗಳ ಶಿಬಿರವು ಬಹಳ ಅಚ್ಚುಕಟ್ಟಾಗಿ ನಡೆಸಲುಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಮತ್ತು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರ ಮಾಸಿಕ ವರದಿಯನ್ನು ಪಡೆದರು ಹಾಗೂ ರಾಜ್ಯ ವಿಕಲಚೇತನರ ಇಲಾಖೆಯಿಂದ ಬಂದಿರುವ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಕಣಿಯೂರು ಗ್ರಾ.ಪಂ. ಚಿರಂಜೀವಿ ಶೆಟ್ಟಿ , ಉಜಿರೆ ಗ್ರಾ.ಪಂ. ವಿಪುಲ್, ಗೇರುಕಟ್ಟೆ ಗ್ರಾ. ಪಂ. ಮಾನಸ , ರಾಧಿಕಾ ಗ್ರಾಮ ಪಂಚಾಯಿತ್ ಇಲಂತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ರಂಜಿತ್ ಗ್ರಾಮ ಪಂಚಾಯತ್ ಶಿಬಾಜೆ, ರಂಜನ್ ಗ್ರಾಮ ಪಂಚಾಯತ್ ವೇಣೂರು, ದಿವ್ಯ ಗ್ರಾಮ ಪಂಚಾಯತ್ ಮಾಲಾಡಿ, ದಿವ್ಯ ಎನ್ ಗ್ರಾಮ ಪಂಚಾಯತ್ ಮರೋಡಿ, ಹೀರಣ್ಣ ಗ್ರಾಮ ಪಂಚಾಯತ್ ಬೆಳಾಲು , ಯಕ್ಷಿತ ಗ್ರಾಮ ಪಂಚಾಯತ್ ಮಚ್ಚಿನ, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಹರೀಶ್ ಗ್ರಾಮ ಪಂಚಾಯತ್ ಧರ್ಮಸ್ಥಳ , ಸುಲೋಚನ ಗ್ರಾಮ ಪಂಚಾಯತ್ ಕುವೆಟ್ಟು, ಪೌಝಿಯ ನಗರ ಪಂಚಾಯತ್ ಬೆಳ್ತಂಗಡಿ, ಜೋಸೆಫ್ ಗ್ರಾಮ ಪಂಚಾಯತ್ ಇಂದಬೆಟ್ಟು,ಗಣೇಶ್ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಚಾರ್ಮಾಡಿ : ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ: ಜನಜಾಗೃತಿ ವೇದಿಕೆ ಪದಾಧಿಕಾರಿಗಳ ಸಹಮಿಲನ ಮತ್ತು ವ್ಯಸನಮುಕ್ತರ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!