25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

ಪೆರಿಂಜೆ : ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರಕ್ಕೆ ದ.ಕ , ಉಡುಪಿ ಹಾಗೂ ಕೊಡಗು ಜಿಲ್ಲೆಯನ್ನೊಳಗೊಂಡ ರಾಷ್ಟ್ರೀಯ ಸೇವಾ ಯೋಜನೆಯ ಮಂಗಳೂರು ವಿಭಾಗಾಧಿಕಾರಿ ಸವಿತಾ ಎರ್ಮಾಳ್ ಅವರು ಭೇಟಿ ನೀಡಿ ವಿದ್ಯಾರ್ಥಿ ಸ್ವಯಂ ಸೇವಕರನ್ನು ಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವದ ಬಗ್ಗೆ , ಧ್ಯೇಯ ಉದ್ದೇಶಗಳ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇಲ್ಲಿನ ಶ್ರೀ ಧ.ಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮುಕುಂದಚಂದ್ರ ಅವರು ಸನ್ಮಾನ ಮಾಡಿದರು.
ಘಟಕ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಅವರು ಅನುಭವದ ಅಭಿಪ್ರಾಯ ಮಂಡಿಸಿದರು.
ಸ್ವಯಂ ಸೇವಕಿ ಹರ್ಷಿತಾ ಪರಿಚಯಿಸಿದರು. ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು. ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ನಿರೂಪಿಸಿ ವಂದಿಸಿದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya
error: Content is protected !!