23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

ಬೆಳ್ತಂಗಡಿ: ಬಡಜನತೆಗೆ ನೆರವಾಗುವ ಮಂಗಳೂರಿನ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಸೂಕ್ತ ನಿರ್ದೆಶನ ನೀಡಬೇಕೆಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅ.12ರಂದು ಮನವಿ ನೀಡಿದ್ದಾರೆ.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕೆ. ವಸಂತ ಬಂಗೇರ ಅವರು, ಈಗಾಗಲೇ ವೆನ್‌ಲಾಕ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯಿಂದ 2 ಕೋಟಿ, ಕೆ.ಎಂ.ಸಿ ಆಸ್ಪತ್ರೆಯಿಂದ 2 ಕೋಟಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಿಂದ 6 ಕೋಟಿ ಅನುದಾನ ನೀಡುವಂತೆ ತಾವು ಆದೇಶ ನೀಡಿದ್ದರೂ ಆರೋಗ್ಯ ರಕ್ಷಾ ಸಮಿತಿಯ ಅನುಮೋದನೆ ಅಗತ್ಯವಿರುವುದರಿಂದ ತಕ್ಷಣ ಸದ್ರಿ ಸಮಿತಿಯ ಸಭೆ ಕರೆದು ಸೂಕ್ತ ನಿರ್ದೆಶನ ನೀಡಬೇಕೆಂದು ಮನವಿ ನೀಡಿದರು.

ಮನವಿಗೆ ಸ್ಪಂದಿಸಿದ ಸಚಿವರು ಮುಂದಿನ ದ.ಕ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ.

Related posts

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಕೆದ್ದು ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ಕೀರ್ತನ್ ರವರ ಚಿಕಿತ್ಸೆಗಾಗಿ ಧನಸಹಾಯ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya
error: Content is protected !!