September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ


ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಜೀವನ ಕೌಶಲ್ಯ ಕಾರ್ಯಾಗಾರವನ್ನು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶಪಾಲರಾದ ಸುನಿಲ್ ಪಂಡಿತ್ ನೆರವೇರಿಸಿದರು .ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಕಾರ್ಯಾಗಾರದ ಮಹತ್ವ ಹಾಗೂ ಉದ್ದೇಶವನ್ನು ತಿಳಿಸಿದರು. ಕಾರ್ಯಾಗಾರದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶಪಾಲರಾದ ಸುನಿಲ್ ಪಂಡಿತ್ ರವರು ಜೀವನ ಕೌಶಲ್ಯಗಳ ಮಾಹಿತಿಗಳು ಸ್ನೇಹಿತರನ್ನು ಹೇಗೆ ಆಯ್ಕೆಮಾಡಬೇಕು, ಜೀವನದಲ್ಲಿ ಮೌಲ್ಯಗಳ ಮಹತ್ವ,ಗುಂಪು ಓದುವಿಕೆಯ ಮಹತ್ವ,ಓದುವ ಕೌಶಲ್ಯ ಹಾಗೂ ಹದಿಹರೆಯದ ಸಮಸ್ಯೆ ಹಾಗೂ ಹೊರಬರುವ ಉಪಾಯ ಇತ್ಯಾದಿಗಳನ್ನು ಕಥೆ, ವಿಡಿಯೋ, ಹಲವಾರು ಚಟುವಟಿಕೆ ಹಾಗೂ ನೈಜ ಉದಾಹರಣೆಗಳ ಮೂಲಕ ತಿಳಿಸಿದರು.

ಕುಮಾರಿ ಭಾರ್ಗವಿ ನಿರ್ವಹಿಸಿದ ಕಾರ್ಯಕ್ರಮದಲ್ಲಿ, ಆಶಿತಾ ಸ್ವಾಗತಿಸಿ, ಅಭಿಜ್ಞಾನ್ ವಂದಿಸಿದರು.

Related posts

ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಮತ್ತು ಸೇವಾಭಾರತಿಯಿಂದ 2025 ರ “ಸೇವಾ ಶ್ರೇಷ್ಠ” ಪುರಸ್ಕಾರ

Suddi Udaya

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya

ಬೆಳ್ತಂಗಡಿ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಸ್ಪರ್ಧಾತ್ಮಕ ಉದ್ಯೋಗ ಮಾರ್ಗದರ್ಶನ ಮತ್ತು ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಮೇಲಂತಬೆಟ್ಟು: ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ-ಸಿರಿಕುಮಾರ ದರ್ಶನ ಮತ್ತು ದೈವಗಳ ನೇಮೋತ್ಸವ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya
error: Content is protected !!