25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

ಬೆಳ್ತಂಗಡಿ : ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮೇಲಂತಬೆಟ್ಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, JCI ಮಂಜುಶ್ರೀ ಬೆಳ್ತಂಗಡಿ, ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮೇರಿ ಮಾಟಿ ಮೇರಿ ದೇಶ್ “( ನನ್ನ ಮಣ್ಣು, ನನ್ನ ದೇಶ )ಅಮೃತ ಕಲಶ ಯಾತ್ರೆ”ಯನ್ನು ರಾಷ್ಟ್ರೀಯ ಸೇವಾ ಯೋಜನೆ, ಎನ್ ಸಿ ಸಿ, ರೋವರ್ಸ್ ಮತ್ತು ರೇಂಜರ್ಸ್ , ಐಕ್ಯುಎಸಿ , ಇದರ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿಅ. 13ರಂದು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಯಾದ ಕುಸುಮಾಧರಾ ಬಿ. ವಹಿಸಿ ಮಾತನಾಡಿ “ಮನ್ ಕೀ ಬಾತ್ ನಲ್ಲಿ ದೇಶವಾಸಿಗಳಿಗೆ ನೀಡಿದ ಕರೆಯಂತೆ ಸ್ವಾತಂತ್ರ ಅಮೃತ ಮಹೋತ್ಸವದ ನೆನಪಿನಲ್ಲಿ ಬಲಿದಾನಗೈದ ಹುತಾತ್ಮಯೋಧರ ಸ್ಮರಣೆಗಾಗಿ ದೇಶದ 7500 ಹಳ್ಳಿಗಳಿಂದ ಮಣ್ಣು ಸಂಗ್ರಹಿಸಿ ಅಮೃತ ವಾಟಿ ಉದ್ಯಾನವನ ನಿರ್ಮಿಸಲು ನಾವೆಲ್ಲರೂ ಅಮೃತ ಕಲಶದಲ್ಲಿ ಮಣ್ಣನು ಕಳುಹಿಸೋಣ. ಯೋಧರ ಕೊಡುಗೆಯನ್ನು ಸ್ಮರಿಸೋಣ” ಎಂದರು.

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ್ ಎನ್ ಹಾಗೂ ಕನ್ನಡ ಉಪನ್ಯಾಸಕರಾದ ಡಾ. ಸುಬ್ರಹ್ಮಣ್ಯ ಕೆ ಶುಭ ಕೋರಿದರು.
ಅದೇ ರೀತಿ ಕಾರ್ಯಕ್ರಮದಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ, ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಮೇಲಂತಬೆಟ್ಟು ಪಂಚಾಯತ್ ನ ಪ್ರಭಾರ ಪಿಡಿಒ ನಿರ್ಮಲ್ ಕುಮಾರ್, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕ ಶಾಂತಪ್ಪ, ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕ ಚಿದಾನಂದ ಇಡ್ಯ, ಜೆ ಸಿ ಐ ಮಂಜಶ್ರೀ ಇದರ ಕಾರ್ಯಕ್ರಮ ಸಂಯೋಜಕರಾದ ಅನುದೀಪ್ ಜೈನ್ , ಪಂಚಾಯತ್ ಸದಸ್ಯರಾದ ಚಂದ್ರ ರಾಜ್ . ಎಂ ಮತ್ತು ಪಂಚಾಯತ್ ಸಿಬ್ಬಂದಿ ವರ್ಗ, ಕಾಲೇಜಿನ ಉಪನ್ಯಾಸವರ್ಗದವರು, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರದ್ಧಾ ನಿರೂಪಿಸಿದರು. ರಕ್ಷಿತಾ ಸ್ವಾಗತಿಸಿ , ಶರಣ್ಯ ಧನ್ಯವಾಧವಿತ್ತರು.

Related posts

ಬೆಳಾಲು ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಚಾಮಾ೯ಡಿ : ಮರಳು ಸಾಗಾಟದ ಲಾರಿ ವಶ

Suddi Udaya
error: Content is protected !!