April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

ಬೆಳ್ತಂಗಡಿ: ತಾಲೂಕು ವಿಕಲಚೇತನರ ಮೇಲ್ವಿಚಾರಕರಾದ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಇವರ ಅಧ್ಯಕ್ಷತೆಯಲ್ಲಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆಯು ಅಂಬೇಡ್ಕರ್ ಭವನ, ಬೆಳ್ತಂಗಡಿಯಲ್ಲಿ ಅ.12 ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ಜೋನ್ ಬ್ಯಾಪಿಸ್ಟ್ ಡಿಸೋಜ ಅವರು ಮಾತಾಡಿ ಪ್ರತೀ ತಿಂಗಳ ಮೂರನೇ ಮಂಗಳವಾರ ನಡೆಯುವ ವಿಕಲಚೇತನರ ಹೊಸ ಗುರುತಿಸುವಿಕೆ ಹಾಗೂ ನವೀಕರಣದ ಶಿಬಿರವನ್ನು ಇನ್ನೂ ಪರಿಣಾಮಕಾರಿಯಾಗಿ ನಡೆಸಲು ಪುನರ್ವಸತಿ ಕಾರ್ಯಕರ್ತರು ಪ್ರತಿ ಮಾಸಿಕ ಕ್ಯಾಂಪ್ ಗಳಲ್ಲಿ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸುವ ಬಗ್ಗೆ ವಿವರಣೆ ಹಾಗೂ ಹೊಸ ಪ್ರಕಾರವನ್ನು ತಿಳಿಸಿದರು. ಹಾಗೂ ಪ್ರತಿ ತಿಂಗಳಲ್ಲಿ ನಡೆಸುವ ಶಿಬಿರವು ಇನ್ನೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಎಲ್ಲಾ ರೀತಿಯಲ್ಲಿ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಆಗಲು ಮತ್ತು ಇನ್ನೂ ಪರಿಣಾಮಕಾರಿಯಾಗಿ ಯಶಸ್ವಿ ಆಗಲು ತಾಲ್ಲೂಕಿನ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ 4 ಗುಂಪುಗಳಾಗಿ ವಿಂಗಡಣೆ ಮಾಡಿದ್ದು ಪ್ರತೀ ಗುಂಪಿನಲ್ಲಿ ಒಬ್ಬರನ್ನು ನಾಯಕನಾಗಿ ಮಾಡಿ ಪ್ರತಿ ತಿಂಗಳ ಶಿಬಿರವು ಬಹಳ ಅಚ್ಚುಕಟ್ಟಾಗಿ ನಡೆಸಲುಬೇಕಾದ ಸಲಹೆ ಸೂಚನೆಗಳನ್ನು ನೀಡಿದರು. ಮತ್ತು ತಾಲ್ಲೂಕಿನ ಎಲ್ಲಾ ಕಾರ್ಯಕರ್ತರ ಮಾಸಿಕ ವರದಿಯನ್ನು ಪಡೆದರು ಹಾಗೂ ರಾಜ್ಯ ವಿಕಲಚೇತನರ ಇಲಾಖೆಯಿಂದ ಬಂದಿರುವ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಕಣಿಯೂರು ಗ್ರಾ.ಪಂ. ಚಿರಂಜೀವಿ ಶೆಟ್ಟಿ , ಉಜಿರೆ ಗ್ರಾ.ಪಂ. ವಿಪುಲ್, ಗೇರುಕಟ್ಟೆ ಗ್ರಾ. ಪಂ. ಮಾನಸ , ರಾಧಿಕಾ ಗ್ರಾಮ ಪಂಚಾಯಿತ್ ಇಲಂತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ರಂಜಿತ್ ಗ್ರಾಮ ಪಂಚಾಯತ್ ಶಿಬಾಜೆ, ರಂಜನ್ ಗ್ರಾಮ ಪಂಚಾಯತ್ ವೇಣೂರು, ದಿವ್ಯ ಗ್ರಾಮ ಪಂಚಾಯತ್ ಮಾಲಾಡಿ, ದಿವ್ಯ ಎನ್ ಗ್ರಾಮ ಪಂಚಾಯತ್ ಮರೋಡಿ, ಹೀರಣ್ಣ ಗ್ರಾಮ ಪಂಚಾಯತ್ ಬೆಳಾಲು , ಯಕ್ಷಿತ ಗ್ರಾಮ ಪಂಚಾಯತ್ ಮಚ್ಚಿನ, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಹರೀಶ್ ಗ್ರಾಮ ಪಂಚಾಯತ್ ಧರ್ಮಸ್ಥಳ , ಸುಲೋಚನ ಗ್ರಾಮ ಪಂಚಾಯತ್ ಕುವೆಟ್ಟು, ಪೌಝಿಯ ನಗರ ಪಂಚಾಯತ್ ಬೆಳ್ತಂಗಡಿ, ಜೋಸೆಫ್ ಗ್ರಾಮ ಪಂಚಾಯತ್ ಇಂದಬೆಟ್ಟು,ಗಣೇಶ್ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಸ್ಥಿತರಿದ್ದರು.

Related posts

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಡಿ.17: ಬೆಳ್ತಂಗಡಿ ತಾಲೂಕು18 ನೇ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya
error: Content is protected !!