23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಮನವಿ

ಬೆಳ್ತಂಗಡಿ: ಬಡಜನತೆಗೆ ನೆರವಾಗುವ ಮಂಗಳೂರಿನ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಶಸ್ತ್ರ ಚಿಕಿತ್ಸೆ ಕೊಠಡಿ ಮತ್ತು ವಾರ್ಡ್ ಗಳಿಗೆ ಉಪಕರಣಗಳನ್ನು ಅಳವಡಿಸುವಂತೆ ಸೂಕ್ತ ನಿರ್ದೆಶನ ನೀಡಬೇಕೆಂದು ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ರವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಅ.12ರಂದು ಮನವಿ ನೀಡಿದ್ದಾರೆ.


ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಕೆ. ವಸಂತ ಬಂಗೇರ ಅವರು, ಈಗಾಗಲೇ ವೆನ್‌ಲಾಕ್ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯಿಂದ 2 ಕೋಟಿ, ಕೆ.ಎಂ.ಸಿ ಆಸ್ಪತ್ರೆಯಿಂದ 2 ಕೋಟಿ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಿಂದ 6 ಕೋಟಿ ಅನುದಾನ ನೀಡುವಂತೆ ತಾವು ಆದೇಶ ನೀಡಿದ್ದರೂ ಆರೋಗ್ಯ ರಕ್ಷಾ ಸಮಿತಿಯ ಅನುಮೋದನೆ ಅಗತ್ಯವಿರುವುದರಿಂದ ತಕ್ಷಣ ಸದ್ರಿ ಸಮಿತಿಯ ಸಭೆ ಕರೆದು ಸೂಕ್ತ ನಿರ್ದೆಶನ ನೀಡಬೇಕೆಂದು ಮನವಿ ನೀಡಿದರು.

ಮನವಿಗೆ ಸ್ಪಂದಿಸಿದ ಸಚಿವರು ಮುಂದಿನ ದ.ಕ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ.

Related posts

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಭೂ ಸ್ವಾಧೀನ ಪ್ರಕ್ರಿಯೆಗೆ ಚಾಲನೆ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಹರೀಶ್ ಎನ್. ನಾಳ ಹೃದಯಾಘಾತದಿಂದ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya
error: Content is protected !!