26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಉಜಿರೆ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!