ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಕುಸಿಯುವ ಹಂತದಲ್ಲಿರುವ ವೇಣೂರು ಸರಕಾರಿ ಪ್ರೌಢಶಾಲೆಗೆ ಶಾಸಕ ಹರೀಶ್ ಪೂಂಜ ಭೇಟಿ, ತಕ್ಷಣ ಸ್ಪಂದನೆ

Suddi Udaya

ಮಡಂತ್ಯಾರು ಯುನಿಯನ್ ಬ್ಯಾಂಕಿನ ಜನಸ್ನೇಹಿ ಬ್ಯಾಂಕ್ ಅಧಿಕಾರಿ ಅಶೋಕ್ ಕೋಟ್ಯಾನ್ ರಿಗೆ ಬೀಳ್ಕೊಡುಗೆ ಹಾಗೂ ಮಡಂತ್ಯಾರು ಸೊಸೈಟಿ ಅಧ್ಯಕ್ಷ- ಸಿಇಒ ಗೂ ಸನ್ಮಾನ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ: ವೈಯಕ್ತಿಕ ಮತ್ತು ಸಾರ್ವಜನಿಕ ಕಾಮಗಾರಿಗೆಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು: ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಭವಾನಿ ಶಂಕರ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya

ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ರಾಮ ನವಮಿ ಆಚರಣೆ

Suddi Udaya
error: Content is protected !!