23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

ವೇಣೂರು: ಗಂಭೀರ ಹೃದಯಾಘಾತವಾಗಿ ಜೀವಪಾಯದಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 40-45 ನಿಮಿಷಗಳಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಪ್ರಸಾದ್ (ಪಚ್ಚು) ಕುಲಾಲ್ ರವರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕುಕ್ಕೇಡಿ ಗ್ರಾಮದ ನಿವಾಸಿ ಹಿಂದೂ ಜಾಗರಣ ವೇದಿಕೆ ಹೆಸರಿನ ಅಂಬ್ಯುಲೆನ್ಸ್ ಚಾಲಕ ಪಚ್ಚು ಯಾನೆ ಪ್ರಸಾದ್ ಕುಲಾಲ್ ರವರು ಅ. 13 ರಂದು ಬೆಳಗ್ಗೆ 11.15ರ ಸುಮಾರಿಗೆ ವೇಣೂರು ನಮನ ಕ್ಲಿನಿಕ್‌ನಿಂದ ಅತ್ಯಂತ ಗಂಭೀರ ಸ್ವರೂಪದ ರೋಗಿಯನ್ನು ಕೇವಲ 45 ನಿಮಿಷಗಳಲ್ಲಿ ಅಂಬ್ಯುಲೆನ್ಸ್‌ನಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿ ಜೀವ ಉಳಿಸಿದ್ದಾರೆ.

ತೀವ್ರ ಹೃದಯನೋವು ಕಾಣಿಸಿಕೊಂಡಿದ್ದ ಪಡ್ಡಂದಡ್ಕ ಕಟ್ಟೆ ಬಳಿಯ ನಿವಾಸಿ ಹರೀಶ್ ಕಟ್ಟೆ ಅವರು ನಮನ ಕ್ಲಿನಿಕ್‌ಗೆ ಆಗಮಿಸಿ ಪ್ರಥಮ ಚಿಕಿತ್ಸೆ ಪಡೆದಿದ್ದರು. ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ತುರ್ತಾಗಿ ಮಂಗಳೂರಿಗೆ ತಲುಸಿಲಾಗಿತ್ತು. ಸದ್ಯ ಹರೀಶ್ ಅವರು ಚೇತರಿಸಿಕೊಂಡಿರುವುದಾಗಿ ಮಾಹಿತಿ ಬಂದಿದ್ದು, ಪ್ರಸಾದ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಪಚ್ಚು ಯಾನೆ ಪ್ರಸಾದ್ ಕುಲಾಲ್ ಅವರು ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.

Related posts

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಗೌಡ ಸಮಾಜ ಬಾಂಧವರು ಜಾತಿ ಕಾಲಂ ನಲ್ಲಿ ಒಕ್ಕಲಿಗ , ಉಪಜಾತಿಯ ಕಾಲಂ ನಲ್ಲಿ ಗೌಡ ಎಂದು ನಮೂದಿಸುವಂತೆ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್ ಪದ್ಮಗೌಡ ಹೇಳಿಕೆ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya
error: Content is protected !!