25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ


ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಸಮಾಪ್ತಿಗೊಂಡಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ಬದನಾಜೆ ಇದರ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಸೀತಾರಾಮ್ ಇವರು ವಿದ್ಯಾರ್ಥಿಗಳು ಸೇವೆಯ ಮೂಲಕ ಮುಖ್ಯ ವಾಹಿನಿಗೆ ಬರುವ ಪ್ರಯತ್ನವನ್ನು ಮಾಡಬೇಕು ಸೇವೆಯೇ ಜೀವನದ ಮೂಲವಾಗಿರಬೇಕು ಸೇವೆ ಮಾಡುವ ಮೂಲಕ ನಮ್ಮ ಜೀವನಕ್ಕೆ ಸಾರ್ಥಕತೆಯನ್ನು ಕೊಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಹೇಳಿದರು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಇದರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ ಕುಮಾರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜನಾಜೆ ಇದರ ಎಸ್‌ಡಿಎಂಸಿ ಅಧ್ಯಕ್ಷ ಅನಿಲ್ ಡಿಸೋಜಾ, ಸರಕಾರಿ ಪ್ರೌಢಶಾಲೆ ಬದಾನಾಜೆ ಇದರ ಎಸ್‌ಡಿಎಂ ಸದಸ್ಯ ರಾಮಯ್ಯ ಗೌಡ ಮಾಚಾರು, ಆನಂದ ಗೌಡ , ಶ್ರೀಮತಿ ಭಾರತಿ , ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾ ಸಮರೋಪ ಭಾಷಣವನ್ನು ಮಾಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಬಿಎ ಬಿಎ ಶಮಿಉಲ್ಲಾ ಶಿಬಿರದ ಸಮಗ್ರ ವರದಿಯನ್ನು ವಾಚಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕರಾದ ಕು. ಪ್ರತಿಕ್ಷ ,ಕು. ಜ್ಯೋತಿ, ಡುಂಡಿರಾಜ್ ವೀರೇಶ್ ಶಿಬಿರದ ಅನುಭವವನ್ನು ಹಂಚಿಕೊಂಡರು .ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಇವರು ಸ್ವಾಗತಿಸಿ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು. ಸಹ ಶಿಬಿರಾಧಿಕಾರಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಬಿರಾಧಿಕಾರಿ ಕುಮಾರಿ ಬಬಿತ ಧನ್ಯವಾದವಿತ್ತರು.

Related posts

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya
error: Content is protected !!