25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾರಾಧನೆ ರಂಗಪೂಜೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕ ದಿ|ವಸಂತ ಬಂಗೇರರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya
error: Content is protected !!