ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

Suddi Udaya

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya

ಬೆಳ್ತಂಗಡಿ : ರಸ್ತೆ ಬದಿ ಕುಸಿದು ಬಿದ್ದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ಮಂಡಲದ ಸಭೆ: ನೂತನ ಪದಾಧಿಕಾರಿಗಳ ನೇಮಕ

Suddi Udaya
error: Content is protected !!