July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ಬ್ಯಾನರ್‌ನಲ್ಲಿ ಎಡವಟ್ಟು

Suddi Udaya

ಬೆಳಾಲು ಶ್ರೀ ಮಾಯ ಮಹಾದೇವ ದೇವಸ್ಥಾನದ ‘ಮಹಾಪ್ರಸಾದ’ ಕೈಪಿಡಿ ಬಿಡುಗಡೆ

Suddi Udaya

ಶಿವಳ್ಳಿ ಸಮಾಜದ ಅರಸಿನಮಕ್ಕಿ ವಲಯದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!