23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

ಬೆಳ್ತಂಗಡಿಗೆ ಆಗಮಿಸಿದ ಎಸ್.ಐ.ಟಿ ಒಂದು ತಂಡ :ಬೆಳ್ತಂಗಡಿಯ ಎಸ್.ಐ.ಟಿ ಕಚೇರಿ ಪರಿಶೀಲನೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಕುಕ್ಕಾವು: ಮನೆ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೇಸ್ತ್ರಿ ಹರೀಶ್ ಮೃತ್ಯು

Suddi Udaya
error: Content is protected !!