30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ