July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ ಆರಂಭ

Suddi Udaya

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

Suddi Udaya

ಚಿನ್ನಯ್ಯನಿಗೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ಸಿ.ಎಂ ಮತ್ತು ಡಿಜಿಪಿಗೆ ಮನವಿ ನೀಡಿದ ಜಯಂತ್ ಟಿ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!