July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya
error: Content is protected !!