ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ‘ಚಿಗುರು’ ಸಂಘ ಉದ್ಘಾಟನೆ

Suddi Udaya

ಪೆರಾಲ್ದರಕಟ್ಟೆ ಮಸ್ಜಿದ್‌ನಲ್ಲಿ ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ದ ಜಾಗೃತಿ ಸಭೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya
error: Content is protected !!