24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

ಬೆಳ್ತಂಗಡಿ: ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿರವರು ಅ.14 ರಂದು ಭೇಟಿ ನೀಡಿದರು.

ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವೇಣೂರು, ಬಜಿರೆ ಮುಂತಾದೆಡೆ ಆಫ್ರಿಕನ್ ಬಸವನಹುಳುವಿನ ಸಮಸ್ಯೆಯಿದೆ. ಇದಕ್ಕೆ ಪರಿಹಾರ ನೀಡಬೇಕು. ಬೆಳ್ತಂಗಡಿಯಲ್ಲಿ ಬೀಜೋತ್ಪನ್ನ ಕೇಂದ್ರಕ್ಕೆ ಪುನಶ್ಚತನಗೊಳಿಸಬೇಕು. ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಯಾವುದೇ ಚಟುವಟಿಕೆ ಇಲ್ಲದೇ ಪಾಳುಬಿದ್ದಿದೆ. ಪರಿಶಿಷ್ಟ ಜಾತಿ ಪಂಗಡದವರಿಗೆ ಕೃಷಿಯೋಗ್ಯ ಭೂಮಿಗಳಿಗಾಗಿ ಕಿಂಡಿ ಅಣೆಕಟ್ಟು ಹೆಚ್ಚಿಸಬೇಕು.ಬೆಳ್ತಂಗಡಿಯಲ್ಲಿ 25ರಲ್ಲಿ 23 ಹುದ್ದೆ ಖಾಲಿಯಿದೆ ಅದನ್ನು ನೇಮಕಾತಿಗೊಳಿಸಬೇಕು.ನಮ್ಮ ಭಾಗದಲ್ಲಿ ಆನೆ ಹಾವಳಿಯಿಂದಾಗಿ ತೊಂದರೆಯಾಗುತ್ತಿದೆ. ಇದಕ್ಕೆ ಸೂಕ್ತ ಕ್ರಮಕ್ಕೆ ರಕ್ಷಿತ್ ಶಿವರಾಂ ವಿನಂತಿಸಿದರು.

ಇದಕ್ಕುತ್ತರಿಸಿದ ಸಚಿವ ಚೆಲುವರಾಯಸ್ವಾಮಿ ”ರಕ್ಷಿತ್ ರವರು ಹೇಳಿದ ವಿಚಾರಗಳಲ್ಲಿ ಕೂಡಲೇ ಮಾಡಬಹುದಾದ ಕೆಲಸಗಳನ್ನು ಶೀಘ್ರ ಮಾಡಲಾಗುವುದು. ಕೃಷಿ ಭಾಗ್ಯ ಯೋಜನೆ ಮತ್ತೆ ಜಾರಿಗೊಳಿಸುತ್ತೇವೆ. ಕೆಲವೊಂದು ತೋಟಗಾರಿಕೆ ಇಲಾಖೆಗೆ ಬರುತ್ತದೆ. ಅದರ ಬಗ್ಗೆ ಆಯಾ ಇಲಾಖೆಗೆ ತಿಳಿಸುತ್ತೇವೆ. ನಿಮ್ಮ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತೇನೆ. ಯಾವುದೇ ಇಲಾಖೆಗಳಿದ್ದರೂ ಅವರ ಗಮನಕ್ಕೆ ತರುತ್ತೇನೆ. .ನಿಮ್ಮೊಂದಿಗೆ ನಾನು ಇರುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಬ್ಲಾಕ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಟ, ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್, ಮುಖಂಡರುಗಳಾದ ಶೇಖರ್ ಕುಕ್ಕೇಡಿ, ಧರಣೇಂದ್ರ ಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ನಡ ಡ್ಯಾಮ್ ನಲ್ಲಿ ಪ್ರವಾಹಕ್ಕೆ ಬಂದು ಸಿಲುಕಿಕೊಂಡಂತಹ ಕಸ ಹಾಗೂ ಮರ ದ ದಿಮ್ಮಿಗಳ ತೆರವು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಪಾಲನಾ ಸಮಿತಿಯಿಂದ ನೂತನವಾಗಿ ಆಯ್ಕೆಗೊಂಡ ಧರ್ಮಾಧ್ಯಕ್ಷರಿಗೆ ಸ್ವಾಗತ

Suddi Udaya
error: Content is protected !!