37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬೆಳ್ತoಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮನವಿ ನೀಡಿದರು.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಹಲವಾರು ನ್ಯೂನತೆಗಳಿದ್ದು ನ್ಯೂನತೆಗಳ ಬಗ್ಗೆ ಡಯಾಲಿಸಿಸ್ ರೋಗಿಗಳು ನನಗೆ ಪದೇ ಪದೇ ದೂರು ನೀಡುತ್ತಿದ್ದಾರೆ. ತಾವು ಇತ್ತೀಚೆಗೆ ಬೆಳ್ತಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂದು ಕೊರತೆಗಳ ಬಗ್ಗೆ ಅರಿತಿರುವಿರಿ. ಆದರೆ ಕೆಲವೊಂದು ಮುಖ್ಯವಾದ ಸಮಸ್ಯೆಗಳು ಇನ್ನೂ ಕೂಡ ಬಗೆಹರಿದಿಲ್ಲ ಎಂದು ರೋಗಿಗಳು ದೂರು ನೀಡಿರುತ್ತಾರೆ ಎಂದು ಬಂಗೇರರು ತಿಳಿಸಿದರು.

ಆದುದರಿಂದ ನ್ಯೂನತೆಗಳನ್ನು ಸರಿಪಡಿಸಿ ಸಂಬoಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿ ಅವರು ಸಚಿವರಲ್ಲಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ, ರಾಜ್ಯ ಅಲ್ಪ ಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಅಶ್ವಿತ್ ಜೈನ್ ಉಪಸ್ಥಿತರಿದ್ದರು.

Related posts

ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರವನ್ನು ನಿರ್ಲಕ್ಷಿಸುವುದು ಸರಿಯಾದ ಕ್ರಮವಲ್ಲ: ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಾಥಮಿಕ ಹಾಗೂ ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಡಿ.13-14: ಬಳಂಜ ಶಾಲೆಗೆ ಅಮೃತ ಮಹೋತ್ಸವ ಸಂಭ್ರಮ

Suddi Udaya
error: Content is protected !!