25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬೆಳ್ತoಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮನವಿ ನೀಡಿದರು.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಹಲವಾರು ನ್ಯೂನತೆಗಳಿದ್ದು ನ್ಯೂನತೆಗಳ ಬಗ್ಗೆ ಡಯಾಲಿಸಿಸ್ ರೋಗಿಗಳು ನನಗೆ ಪದೇ ಪದೇ ದೂರು ನೀಡುತ್ತಿದ್ದಾರೆ. ತಾವು ಇತ್ತೀಚೆಗೆ ಬೆಳ್ತಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂದು ಕೊರತೆಗಳ ಬಗ್ಗೆ ಅರಿತಿರುವಿರಿ. ಆದರೆ ಕೆಲವೊಂದು ಮುಖ್ಯವಾದ ಸಮಸ್ಯೆಗಳು ಇನ್ನೂ ಕೂಡ ಬಗೆಹರಿದಿಲ್ಲ ಎಂದು ರೋಗಿಗಳು ದೂರು ನೀಡಿರುತ್ತಾರೆ ಎಂದು ಬಂಗೇರರು ತಿಳಿಸಿದರು.

ಆದುದರಿಂದ ನ್ಯೂನತೆಗಳನ್ನು ಸರಿಪಡಿಸಿ ಸಂಬoಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿ ಅವರು ಸಚಿವರಲ್ಲಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ, ರಾಜ್ಯ ಅಲ್ಪ ಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಅಶ್ವಿತ್ ಜೈನ್ ಉಪಸ್ಥಿತರಿದ್ದರು.

Related posts

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಣಿಯೂರು ವಲಯದ ಮೈರೋಲ್ತಡ್ಕ, ಮೊಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ನ.11-13: ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೌಶಲ್ಯ ಜ್ಞಾನದ ಉಚಿತ ತರಬೇತಿ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya
error: Content is protected !!