September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೆಳ್ತಂಗಡಿ ಘಟಕ ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಸಂಭ್ರಮ 2023ರ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ಇದರ ಸಹಯೋಗದೊಂದಿಗೆ ‘ಮಾಮರ ಪ್ರಕಾಶನ ಮೈಸೂರು’ ಇವರು ಪ್ರಕಟಿಸಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರುಇವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ ಸಮಾರಂಭವು ಅ.14 ರಂದು ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಅಧ್ಯಕ್ಷ ಲ| ಉಮೇಶ್ ಶೆಟ್ಟಿ ವಹಿಸಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತುಅಧ್ಯಕ್ಷ ಡಿ ಯದುಪತಿ ಗೌಡ ಪುಸ್ತಕ ಬಿಡುಗಡೆ ಗೊಳಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಬಂಟ್ವಾಳ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ, ಶಿಕ್ಷಕರು ಹಾಗೂ ಹಿರಿಯ ಸಾಹಿತಿ ಅರವಿಂದ ಚೊಕ್ಕಾಡಿ, ಮೌಲ್ಯಗಳ ಹುಡುಕಾಟ ಲೇಖಕರು ಯಾಕೂಬ್ ಎಸ್ ಕೊಯ್ಯೂರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಸದಸ್ಯರು, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಲಯನ್ಸ್ ಆಶ್ರಫ್ ಆಲಿಕುಂಞಿ ಪ್ರಸ್ತಾವಣೆಗೈದರು. ಅಬ್ಬುಲ್ ಖದರ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಕುತ್ಲೂರು ಶಾಲೆಯಲ್ಲಿ ವನಮಹೋತ್ಸವ: ಕುತ್ಲೂರು ಶಾಲಾ ವಠಾರದಲ್ಲಿ ಹಣ್ಣುಗಳ ಉದ್ಯಾನ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಭರವಸೆ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!