22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

ವೇಣೂರು: ಗಂಭೀರ ಹೃದಯಾಘಾತವಾಗಿ ಜೀವಪಾಯದಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 40-45 ನಿಮಿಷಗಳಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಪ್ರಸಾದ್ (ಪಚ್ಚು) ಕುಲಾಲ್ ರವರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕುಕ್ಕೇಡಿ ಗ್ರಾಮದ ನಿವಾಸಿ ಹಿಂದೂ ಜಾಗರಣ ವೇದಿಕೆ ಹೆಸರಿನ ಅಂಬ್ಯುಲೆನ್ಸ್ ಚಾಲಕ ಪಚ್ಚು ಯಾನೆ ಪ್ರಸಾದ್ ಕುಲಾಲ್ ರವರು ಅ. 13 ರಂದು ಬೆಳಗ್ಗೆ 11.15ರ ಸುಮಾರಿಗೆ ವೇಣೂರು ನಮನ ಕ್ಲಿನಿಕ್‌ನಿಂದ ಅತ್ಯಂತ ಗಂಭೀರ ಸ್ವರೂಪದ ರೋಗಿಯನ್ನು ಕೇವಲ 45 ನಿಮಿಷಗಳಲ್ಲಿ ಅಂಬ್ಯುಲೆನ್ಸ್‌ನಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿ ಜೀವ ಉಳಿಸಿದ್ದಾರೆ.

ತೀವ್ರ ಹೃದಯನೋವು ಕಾಣಿಸಿಕೊಂಡಿದ್ದ ಪಡ್ಡಂದಡ್ಕ ಕಟ್ಟೆ ಬಳಿಯ ನಿವಾಸಿ ಹರೀಶ್ ಕಟ್ಟೆ ಅವರು ನಮನ ಕ್ಲಿನಿಕ್‌ಗೆ ಆಗಮಿಸಿ ಪ್ರಥಮ ಚಿಕಿತ್ಸೆ ಪಡೆದಿದ್ದರು. ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ತುರ್ತಾಗಿ ಮಂಗಳೂರಿಗೆ ತಲುಸಿಲಾಗಿತ್ತು. ಸದ್ಯ ಹರೀಶ್ ಅವರು ಚೇತರಿಸಿಕೊಂಡಿರುವುದಾಗಿ ಮಾಹಿತಿ ಬಂದಿದ್ದು, ಪ್ರಸಾದ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಪಚ್ಚು ಯಾನೆ ಪ್ರಸಾದ್ ಕುಲಾಲ್ ಅವರು ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.

Related posts

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತಿ ನಲ್ಲಿ ಮಹಿಳಾ ಗ್ರಾಮ ಸಭೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!