23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

ವೇಣೂರು: ಗಂಭೀರ ಹೃದಯಾಘಾತವಾಗಿ ಜೀವಪಾಯದಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 40-45 ನಿಮಿಷಗಳಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಪ್ರಸಾದ್ (ಪಚ್ಚು) ಕುಲಾಲ್ ರವರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕುಕ್ಕೇಡಿ ಗ್ರಾಮದ ನಿವಾಸಿ ಹಿಂದೂ ಜಾಗರಣ ವೇದಿಕೆ ಹೆಸರಿನ ಅಂಬ್ಯುಲೆನ್ಸ್ ಚಾಲಕ ಪಚ್ಚು ಯಾನೆ ಪ್ರಸಾದ್ ಕುಲಾಲ್ ರವರು ಅ. 13 ರಂದು ಬೆಳಗ್ಗೆ 11.15ರ ಸುಮಾರಿಗೆ ವೇಣೂರು ನಮನ ಕ್ಲಿನಿಕ್‌ನಿಂದ ಅತ್ಯಂತ ಗಂಭೀರ ಸ್ವರೂಪದ ರೋಗಿಯನ್ನು ಕೇವಲ 45 ನಿಮಿಷಗಳಲ್ಲಿ ಅಂಬ್ಯುಲೆನ್ಸ್‌ನಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿ ಜೀವ ಉಳಿಸಿದ್ದಾರೆ.

ತೀವ್ರ ಹೃದಯನೋವು ಕಾಣಿಸಿಕೊಂಡಿದ್ದ ಪಡ್ಡಂದಡ್ಕ ಕಟ್ಟೆ ಬಳಿಯ ನಿವಾಸಿ ಹರೀಶ್ ಕಟ್ಟೆ ಅವರು ನಮನ ಕ್ಲಿನಿಕ್‌ಗೆ ಆಗಮಿಸಿ ಪ್ರಥಮ ಚಿಕಿತ್ಸೆ ಪಡೆದಿದ್ದರು. ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ತುರ್ತಾಗಿ ಮಂಗಳೂರಿಗೆ ತಲುಸಿಲಾಗಿತ್ತು. ಸದ್ಯ ಹರೀಶ್ ಅವರು ಚೇತರಿಸಿಕೊಂಡಿರುವುದಾಗಿ ಮಾಹಿತಿ ಬಂದಿದ್ದು, ಪ್ರಸಾದ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಪಚ್ಚು ಯಾನೆ ಪ್ರಸಾದ್ ಕುಲಾಲ್ ಅವರು ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

Suddi Udaya

ನಕಲಿ ಚಿನ್ನದ ಹಾವಳಿ ತಡೆಗೆ ಶಾಸಕರಿಗೆ ಮನವಿ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya
error: Content is protected !!