September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

ವೇಣೂರು: ಗಂಭೀರ ಹೃದಯಾಘಾತವಾಗಿ ಜೀವಪಾಯದಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 40-45 ನಿಮಿಷಗಳಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಪ್ರಸಾದ್ (ಪಚ್ಚು) ಕುಲಾಲ್ ರವರು ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕುಕ್ಕೇಡಿ ಗ್ರಾಮದ ನಿವಾಸಿ ಹಿಂದೂ ಜಾಗರಣ ವೇದಿಕೆ ಹೆಸರಿನ ಅಂಬ್ಯುಲೆನ್ಸ್ ಚಾಲಕ ಪಚ್ಚು ಯಾನೆ ಪ್ರಸಾದ್ ಕುಲಾಲ್ ರವರು ಅ. 13 ರಂದು ಬೆಳಗ್ಗೆ 11.15ರ ಸುಮಾರಿಗೆ ವೇಣೂರು ನಮನ ಕ್ಲಿನಿಕ್‌ನಿಂದ ಅತ್ಯಂತ ಗಂಭೀರ ಸ್ವರೂಪದ ರೋಗಿಯನ್ನು ಕೇವಲ 45 ನಿಮಿಷಗಳಲ್ಲಿ ಅಂಬ್ಯುಲೆನ್ಸ್‌ನಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ತಲುಪಿಸಿ ಜೀವ ಉಳಿಸಿದ್ದಾರೆ.

ತೀವ್ರ ಹೃದಯನೋವು ಕಾಣಿಸಿಕೊಂಡಿದ್ದ ಪಡ್ಡಂದಡ್ಕ ಕಟ್ಟೆ ಬಳಿಯ ನಿವಾಸಿ ಹರೀಶ್ ಕಟ್ಟೆ ಅವರು ನಮನ ಕ್ಲಿನಿಕ್‌ಗೆ ಆಗಮಿಸಿ ಪ್ರಥಮ ಚಿಕಿತ್ಸೆ ಪಡೆದಿದ್ದರು. ಅಲ್ಲಿಂದ ವೈದ್ಯರ ಸಲಹೆ ಮೇರೆಗೆ ತುರ್ತಾಗಿ ಮಂಗಳೂರಿಗೆ ತಲುಸಿಲಾಗಿತ್ತು. ಸದ್ಯ ಹರೀಶ್ ಅವರು ಚೇತರಿಸಿಕೊಂಡಿರುವುದಾಗಿ ಮಾಹಿತಿ ಬಂದಿದ್ದು, ಪ್ರಸಾದ್ ಅವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಪಚ್ಚು ಯಾನೆ ಪ್ರಸಾದ್ ಕುಲಾಲ್ ಅವರು ನಿರಂತರವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ.

Related posts

ಗುರುವಾಯನಕೆರೆ ಐವರು ವಿದ್ಯಾರ್ಥಿಗಳಿಗೆ ಸೈಕಲ್ ಕೊಡುಗೆ ನೀಡಿದ ಉದ್ಯಮಿ ಉಮರ್ ಜಿ.ಕೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ

Suddi Udaya
error: Content is protected !!