23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುಂಡೂರಿ ಗ್ರಾಮದ ಮಹಿಳೆಯೋವ೯ರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಗುಂಡೂರಿ ಗ್ರಾಮದ ನಿವಾಸಿ ಮಮತಾ ಎಂಬವರು ಬಂಟ್ವಾಳ ಠಾಣೆಗೆ ನೀಡಿದ ದೂರಿನಂತೆ, ಅ. 12 ರಂದು ಸಂಜೆ ಅತ್ತೆ ತಂಗಮ್ಮರವರು ಸಿದ್ದಕಟ್ಟೆ ಎಂಬಲ್ಲಿ ಬಂಟ್ವಾಳ ಮೂಡಬಿದ್ರೆ ರಾಜ್ಯ ಹೆದ್ದಾರಿಯನ್ನು ದಾಟುತ್ತಿರುವಾಗ, ಕೆಎ-19-ಯು-5837 ನೇ ಮೋಟಾರ್ ಸೈಕಲ್ ಸವಾರ ರಾಜೇಶ್ ಎಂಬವರು ಮೋಟಾರ್ ಸೈಕಲನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ತಂಗಮ್ಮರವರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಂಗಮ್ಮರವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 142/2023 ಕಲಂ : 279,337 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya

ನ್ಯಾಯತರ್ಪು ಒಕ್ಕೂಟದ ಸಂಘದ ತ್ರೈಮಾಸಿಕ ಸಭೆ

Suddi Udaya

ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಎರಡನೇ ಭಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು, ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya
error: Content is protected !!