30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುಂಡೂರಿ ಗ್ರಾಮದ ಮಹಿಳೆಯೋವ೯ರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಗುಂಡೂರಿ ಗ್ರಾಮದ ನಿವಾಸಿ ಮಮತಾ ಎಂಬವರು ಬಂಟ್ವಾಳ ಠಾಣೆಗೆ ನೀಡಿದ ದೂರಿನಂತೆ, ಅ. 12 ರಂದು ಸಂಜೆ ಅತ್ತೆ ತಂಗಮ್ಮರವರು ಸಿದ್ದಕಟ್ಟೆ ಎಂಬಲ್ಲಿ ಬಂಟ್ವಾಳ ಮೂಡಬಿದ್ರೆ ರಾಜ್ಯ ಹೆದ್ದಾರಿಯನ್ನು ದಾಟುತ್ತಿರುವಾಗ, ಕೆಎ-19-ಯು-5837 ನೇ ಮೋಟಾರ್ ಸೈಕಲ್ ಸವಾರ ರಾಜೇಶ್ ಎಂಬವರು ಮೋಟಾರ್ ಸೈಕಲನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ತಂಗಮ್ಮರವರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಂಗಮ್ಮರವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 142/2023 ಕಲಂ : 279,337 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಅಸಹಜವಾಗಿ ಸಾವನ್ನಪ್ಪಿದ ಬಾಲಕ ಸುಮಂತ್ ಮನೆಗೆ:ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು ಭೇಟಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!