22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಗುಂಡೂರಿ ಗ್ರಾಮದ ಮಹಿಳೆಯೋವ೯ರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.

ಗುಂಡೂರಿ ಗ್ರಾಮದ ನಿವಾಸಿ ಮಮತಾ ಎಂಬವರು ಬಂಟ್ವಾಳ ಠಾಣೆಗೆ ನೀಡಿದ ದೂರಿನಂತೆ, ಅ. 12 ರಂದು ಸಂಜೆ ಅತ್ತೆ ತಂಗಮ್ಮರವರು ಸಿದ್ದಕಟ್ಟೆ ಎಂಬಲ್ಲಿ ಬಂಟ್ವಾಳ ಮೂಡಬಿದ್ರೆ ರಾಜ್ಯ ಹೆದ್ದಾರಿಯನ್ನು ದಾಟುತ್ತಿರುವಾಗ, ಕೆಎ-19-ಯು-5837 ನೇ ಮೋಟಾರ್ ಸೈಕಲ್ ಸವಾರ ರಾಜೇಶ್ ಎಂಬವರು ಮೋಟಾರ್ ಸೈಕಲನ್ನು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ತಂಗಮ್ಮರವರಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ತಂಗಮ್ಮರವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಆರೋಪಿಸಿದ್ದಾರೆ.ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 142/2023 ಕಲಂ : 279,337 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ.

Related posts

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಎಕ್ಸೆಲ್ ನಲ್ಲಿ ಅಮೆರಿಕಾ ವಿಜ್ಞಾನಿಗಳ ಜೊತೆ ಸಂವಾದ

Suddi Udaya

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
error: Content is protected !!