24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ರಾಜ್ಯ ಮಟ್ಟದ ಕ್ರೀಡಾಕೂಟದ ಗುಂಡೆಸತ ಸ್ಪರ್ಧೆ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯ ಕು.ಜಾಹ್ನವಿ ಪ್ರಥಮ

Suddi Udaya

ನಾವೂರು ಬೃಹತ್ ರಕ್ತದಾನ ಶಿಬಿರ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸುವರ್ಣಮಹೋತ್ಸವ ಸಂಭ್ರಮದಲ್ಲಿ ಸಾಲಿಗ್ರಾಮ ಮಕ್ಕಳ ಮೇಳ: ಧರ್ಮಸ್ಥಳದಲ್ಲಿ ಸುವರ್ಣ ಪರ್ವ ಉದ್ಘಾಟನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya
error: Content is protected !!