July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

ಅಳದಂಗಡಿ ಸೊಸೈಟಿಯಿಂದ ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ: ಸುವರ್ಣ ಸಂಭ್ರಮ-2026 ಚಾಲನೆ,ಕೃಷಿ ತರಬೇತುದಾರರಿಗೆ ಸನ್ಮಾನ,ಸಾಧಕ ಕೃಷಿಕರಿಗೆ ಗೌರವಾರ್ಪಣೆ: ದ.ಕ. ಜಿಲ್ಲೆಯ ಕೃಷಿಕರು ಚಂಚಲ ಮನಸ್ಥಿತಿಯವರು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya
error: Content is protected !!