25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

ಬೆಳ್ತಂಗಡಿ: ಮೂಡಬಿದ್ರೆ ಸಮೀಪದ ಹೆಜಮಾಡಿಕೋಡಿ ಬಂದರು ಪ್ರದೇಶದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ ಗಳನ್ನು ಕಳವುಗೈದ ಬೆಳ್ತಂಗಡಿ ತಾಲೂಕಿನ ಐವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳಿಂದ ರೂ. 21 ಲಕ್ಷ ಮೊತ್ತದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.


ಬೆಳ್ತಂಗಡಿ ತಾಲೂಕಿನ ಹಳೆಪೇಟೆ ಕುಂಠಿನಿ, ಮದ್ದಡ್ಕ, ಗುರುವಾಯನಕರೆ ಪ್ರದೇಶದ ನಿವಾಸಿಗಳಾದ ಮೊಹಮ್ಮದ್ ಹಸೀಬ್, ನಿಜಾಮುದ್ದೀನ್, ಮೊಹಮ್ಮದ್ ಹಫೀಜ್, ಮೊಹಮ್ಮದ್ ಆಶಿರ್ ಕೆ. ಮತ್ತು ಕಬ್ಬಿದ ಸೊತ್ತುಗಳನ್ನು ಖರೀದಿಸಿದ ಹಂಝಾ ಬೆಳ್ತಂಗಡಿ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ ಕಳವು ಗೈದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಕಳೆದ ಆ. 24ರಿಂದ ಸೆ.25ರ ಅವಧಿಯಲ್ಲಿ ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು ರೂ. 18,00,078 ಮೌಲ್ಯದ ಕಬ್ಬಿಣದ ಶೀಟುಗಳನ್ನು ಮತ್ತು ರಾಡ್‌ಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ದ ಅ. 3ರಂದು ಪಡುಬಿದ್ರೆ ಪೊಲೀಸ್ ಠಾಣೆಗೆ ಕಂಪೆನಿಯವರು ದೂರು ನೀಡಿದ್ದು, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಕಾಪು ವೃತ್ತ ನಿರೀಕ್ಷಕಿ ಜಯಶ್ರೀಮಾನೆ, ಪಡುಬಿದ್ರಿ ಎಸ್.ಐ ಪ್ರಸನ್ನ ಎಂ.ಎಸ್., ಕೈಂ ಎಸ್ಸೈ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ತನಿಖೆ ಚುರುಕುಗೊಳಿಸಿದ ಪಡುಬಿದ್ರಿ ಪೊಲೀಸರು ಅ. ೬ರಂದು ಬೆಳ್ತಂಗಡಿ ತಾಲೂಕಿನ ಮದ್ದಡ್ಕ, ಹಳೆಪೇಟೆ ಕುಂಠಿನಿ ಬಳಿ ಆರೋಪಿಗಳನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ನಡೆಸಿದ ಮೂಡಬಿದ್ರೆ ಪೊಲೀಸರು ತನಿಖೆ ನಡೆಸಿ ಬಂಧಿತರನ್ನು ನ್ಯಾಯಾಲಯ ಹಾಜರುಪಡಿಸಲಾಗಿದ್ದು, ಹದಿನೈದ ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


ಕಳವಾದ ಸೊತ್ತುಗಳ ವಶ:
ಆರೋಪಿಗಳಿಂದ 5,76,653 ರೂ. ಮೌಲ್ಯದ 86 ಕಬ್ಬಿಣದ ಎಂ. ಎಸ್. ಶೀಟುಗಳು, 61,382 ರೂ. ಮೌಲ್ಯದ ಕಬ್ಬಿಣದ ರಾಡ್‌ಗಳು, 3 ಲಕ್ಷರೂ. ಮೌಲ್ಯದ ಟಾಟಾ ಏಸ್ ವಾಹನ, 5 ಲಕ್ಷರೂ. ಮೌಲ್ಯದ ಪಿಕ್‌ಅಪ್ ವಾಹನ, 7 ಲಕ್ಷರೂ. ಮೌಲ್ಯದ ಇನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶೇ. 70ರಷ್ಟು ಕದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉಳಿದ ಸೊತ್ತುಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Related posts

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಸಿ.ಎ ಸಾಧಕರಿಗೆ ಸನ್ಮಾನ

Suddi Udaya

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya
error: Content is protected !!