38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

ಬೆಳ್ತಂಗಡಿ: ಮೂಡಬಿದ್ರೆ ಸಮೀಪದ ಹೆಜಮಾಡಿಕೋಡಿ ಬಂದರು ಪ್ರದೇಶದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ ಗಳನ್ನು ಕಳವುಗೈದ ಬೆಳ್ತಂಗಡಿ ತಾಲೂಕಿನ ಐವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಗಳಿಂದ ರೂ. 21 ಲಕ್ಷ ಮೊತ್ತದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.


ಬೆಳ್ತಂಗಡಿ ತಾಲೂಕಿನ ಹಳೆಪೇಟೆ ಕುಂಠಿನಿ, ಮದ್ದಡ್ಕ, ಗುರುವಾಯನಕರೆ ಪ್ರದೇಶದ ನಿವಾಸಿಗಳಾದ ಮೊಹಮ್ಮದ್ ಹಸೀಬ್, ನಿಜಾಮುದ್ದೀನ್, ಮೊಹಮ್ಮದ್ ಹಫೀಜ್, ಮೊಹಮ್ಮದ್ ಆಶಿರ್ ಕೆ. ಮತ್ತು ಕಬ್ಬಿದ ಸೊತ್ತುಗಳನ್ನು ಖರೀದಿಸಿದ ಹಂಝಾ ಬೆಳ್ತಂಗಡಿ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಂದ ಕಳವು ಗೈದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.


ಕಳೆದ ಆ. 24ರಿಂದ ಸೆ.25ರ ಅವಧಿಯಲ್ಲಿ ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು ರೂ. 18,00,078 ಮೌಲ್ಯದ ಕಬ್ಬಿಣದ ಶೀಟುಗಳನ್ನು ಮತ್ತು ರಾಡ್‌ಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ದ ಅ. 3ರಂದು ಪಡುಬಿದ್ರೆ ಪೊಲೀಸ್ ಠಾಣೆಗೆ ಕಂಪೆನಿಯವರು ದೂರು ನೀಡಿದ್ದು, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಕಾಪು ವೃತ್ತ ನಿರೀಕ್ಷಕಿ ಜಯಶ್ರೀಮಾನೆ, ಪಡುಬಿದ್ರಿ ಎಸ್.ಐ ಪ್ರಸನ್ನ ಎಂ.ಎಸ್., ಕೈಂ ಎಸ್ಸೈ ಸುದರ್ಶನ್ ದೊಡ್ಡಮನಿ ನೇತೃತ್ವದಲ್ಲಿ ತನಿಖೆ ಚುರುಕುಗೊಳಿಸಿದ ಪಡುಬಿದ್ರಿ ಪೊಲೀಸರು ಅ. ೬ರಂದು ಬೆಳ್ತಂಗಡಿ ತಾಲೂಕಿನ ಮದ್ದಡ್ಕ, ಹಳೆಪೇಟೆ ಕುಂಠಿನಿ ಬಳಿ ಆರೋಪಿಗಳನ್ನು ಪತ್ತೆ ಹಚ್ಚಿ ವಶಕ್ಕೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖೆ ನಡೆಸಿದ ಮೂಡಬಿದ್ರೆ ಪೊಲೀಸರು ತನಿಖೆ ನಡೆಸಿ ಬಂಧಿತರನ್ನು ನ್ಯಾಯಾಲಯ ಹಾಜರುಪಡಿಸಲಾಗಿದ್ದು, ಹದಿನೈದ ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


ಕಳವಾದ ಸೊತ್ತುಗಳ ವಶ:
ಆರೋಪಿಗಳಿಂದ 5,76,653 ರೂ. ಮೌಲ್ಯದ 86 ಕಬ್ಬಿಣದ ಎಂ. ಎಸ್. ಶೀಟುಗಳು, 61,382 ರೂ. ಮೌಲ್ಯದ ಕಬ್ಬಿಣದ ರಾಡ್‌ಗಳು, 3 ಲಕ್ಷರೂ. ಮೌಲ್ಯದ ಟಾಟಾ ಏಸ್ ವಾಹನ, 5 ಲಕ್ಷರೂ. ಮೌಲ್ಯದ ಪಿಕ್‌ಅಪ್ ವಾಹನ, 7 ಲಕ್ಷರೂ. ಮೌಲ್ಯದ ಇನೋವಾ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶೇ. 70ರಷ್ಟು ಕದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಉಳಿದ ಸೊತ್ತುಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಶಿವಮೊಗ್ಗ ಸಂಸದ ರಾಘವೇಂದ್ರ

Suddi Udaya

ರಬ್ಬರ್ ಬೆಳೆಗಾರರ ಸಮಸ್ಯೆ: ಕೇಂದ್ರ ಸರಕಾರಕ್ಕೆ ಹಕ್ಕೊತ್ತಾಯ ವರದಿ ಸಲ್ಲಿಕೆ

Suddi Udaya

ಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ, ಗೋ ಸೇವಾ ಗತಿವಿಧಿ ಕರ್ನಾಟಕ ಇದರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 15,16,17 ರಂದು ವೇಣೂರು, ಬೆಳ್ತಂಗಡಿ,ಉಜಿರೆ ರಾಜ ಮಾರ್ಗದಲ್ಲಿ ಸಾಗಲಿದೆ ಗೋ ರಥಯಾತ್ರೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya
error: Content is protected !!