23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮ ದಿನದ ಅಂಗವಾಗಿ ಸ್ಮರಣೆ ಕಾರ್ಯಕ್ರಮ ವಾಣಿ ವಿದ್ಯಾ ಸಂಸ್ಥೆಯಲ್ಲಿ ಜರಗಿತು.

ನಿವೃತ್ತ ಪ್ರಾಚಾರ್ಯರಾದ ಕೃಷ್ಣಪ್ಪ ಪೂಜಾರಿಯವರು ಡಾ. ಕಾರಂತರ ನೆನಪುಗಳನ್ನು ಮಾಡುತ್ತಾ ಡಾ.ಕಾರಂತರು ಓರ್ವ ಬೆರಗಿನ ವ್ಯಕ್ತಿತ್ವದವರು. ತಾನು ಕೈಯಾಡಿಸಿದ ಕ್ಷೇತ್ರದಲ್ಲಿ ಅಧ್ಯಯನಶೀಲರಾಗಿ ಅದ್ಭುತ ಸಾಧನೆ ಮಾಡಿದವರು. ಅವರೋರ್ವ ಶಕ್ತಿ. ಇಂದಿನ ಯುವ ಜನಾಂಗದವರು ಡಾ. ಕಾರಂತರ ಬಗ್ಗೆ ಓದಿ ತಿಳಿದುಕೊಳ್ಳುವ ಆಸಕ್ತಿ ರೂಢಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ ಯದುಪತಿ ಗೌಡರು ವಹಿಸಿದ್ದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ರವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿಗಳು , ವಾಣಿ ಕಾಲೇಜಿನ ಉಪನ್ಯಾಸಕರೂ ಆದ ಬೆಳ್ಳಿಯಪ್ಪ ರವರು ವಂದಿಸಿದರು.


ವೇದಿಕೆಯಲ್ಲಿ ಸಾಹಿತ್ಯ ಪರಿಷತ್ತಿನ ಇನ್ನೋರ್ವ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಮೀಳಾರವರು ಉಪಸ್ಥಿತರಿದ್ದರು. ಸಭೆಗೆ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಉಮೇಶ್ ಶೆಟ್ಟಿ, ಸಾಹಿತ್ಯ ಪರಿಷತ್ತಿನ ಸದಸ್ಯರಾದ ಲಕ್ಷ್ಮೀನಾರಾಯಣ ಕೆ, ಅಶ್ರಫ್ ಆಲಿ ಕುಂಞಿ ಮುಂಡಾಜೆ, ಗಣಪತಿ ಭಟ್ ಕುಳಮರ್ವ, ಅಮಿತಾಬ್ ಹೆಗ್ಡೆ, ಡಾ.ದಿವ ಕೊಕ್ಕಡ, ವಸತಿ ಟಿ ನಿಡ್ಲೆ, ಅನುರಾಧ ರಾವ್ ಬೆಳ್ತಂಗಡಿ, ಧರಣೇಂದ್ರ ಕೆ ಜೈನ್ ಮೊದಲಾದವರು ಆಗಮಿಸಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ದೇವದಾಸ್ ಶೆಟ್ಟಿ, ಕಾರ್ಯದರ್ಶಿ ಕಿರಣ್‌ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಅಮಿತಾನಂದ ಹೆಗ್ಡೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಪಜಿರಡ್ಕ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ನೀರುಪಾಲು

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ನಾವೂರು ಕೈಕಂಬ-ಹತ್ಯಡ್ಕ-ಸಂಪರ್ಕ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ರೂ. 300ಲಕ್ಷ ಮಂಜೂರಿಗೆ ಕ್ರಮ ಕೈಗೊಳ್ಳುವಂತೆ ತಾ.ಪಂ ಇ.ಒ ಪತ್ರ: ಸಮಸ್ಯೆ ಬಗ್ಗೆ ಬೆಳಕು ಚೆಲ್ಲಿದ ಸುದ್ದಿ ‘ಉದಯ ಪತ್ರಿಕೆ’

Suddi Udaya
error: Content is protected !!