25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು : ಸಿಡಿಲು ಬಡಿದು ಮನೆಗೆ ಹಾನಿ


ತೆಕ್ಕಾರು :ಸಿಡಿಲು ಬಡಿದು ಮನೆಯೊಂದು ಭಾಗಶಃ ಹಾನಿಗೀಡಾದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಎಂಬಲ್ಲಿ ಅ.12ರಂದು ನಡೆದಿದೆ.

ಘಟನೆಯಿಂದ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆ ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ. ತೆಕ್ಕಾರಿನ ಕಾಪಿಗುಡ್ಡೆಯ ತಾಹಿರಾ ಎಂಬವರ ಮನೆಗೆ ಅ.12 ರಂದು ಸಂಜೆ ಸಿಡಿಲು ಬಡಿದಿದ್ದು ಕೆಲವು ಕಡೆ ಗೋಡೆಯ ಕೆಂಪುಕಲ್ಲುಗಳೇ ಛಿದ್ರಗೊಂಡಿವೆ. ಅಲ್ಲದೇ, ಎಲ್ಲ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ವಯ ಸಂಪೂರ್ಣ ಸುಟ್ಟು ಹೋಗಿದ್ದು, ಸ್ವಿಚ್ ಬೋಡ್‌ಗಳು ಗೋಡೆಯಿಂದ ಮೇಲೆದ್ದು ಬಂದು ನೇತಾಡುತ್ತಿವೆ. ಘಟನೆಯಿಂದ ಸುಮಾರು 2 ಲಕ್ಷಕ್ಕೂ ಅಧಿಕ ಹಾನಿ ಸಂಭವಿಸಿದೆ.

ಮಳೆ, ಸಿಡಿಲು ಆರಂಭವಾದಾಗ ಮನೆ ಮಂದಿ ಅಲ್ಲೇ ಇರುವ ಸಂಬಂಧಿಕರ ಮನೆಗೆ ತೆರಳಿದ್ದು, ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ ಯಾರೂ ಇಲ್ಲದಿದ್ದುದ್ದರಿಂದ ಮನೆ ಮಂದಿ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ

ಸ್ಥಳಕ್ಕೆ ತೆಕ್ಕಾರು ಗ್ರಾಮಕರಣಿಕೆ ಸಾಕಮ್ಮ ಬೇಟಿ ನೀಡಿದ್ದು ಪರಿಶೀಲನೆ ನಡೆಸಿದರೆ.

Related posts

ಅಂತರ್ ಜಿಲ್ಲಾ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ವಾಲಿಬಾಲ್ ಪಂದ್ಯಾಟ: ಅನುಗ್ರಹ ಪ್ರೌಢಶಾಲಾ ಬಾಲಕಿಯರ ತಂಡಕ್ಕೆ ಪ್ರಶಸ್ತಿ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!