July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿನ ನ್ಯೂನತೆಗಳನ್ನು ಸರಿಪಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿದ ಬೆಳ್ತoಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ಮನವಿ ನೀಡಿದರು.

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ಹಲವಾರು ನ್ಯೂನತೆಗಳಿದ್ದು ನ್ಯೂನತೆಗಳ ಬಗ್ಗೆ ಡಯಾಲಿಸಿಸ್ ರೋಗಿಗಳು ನನಗೆ ಪದೇ ಪದೇ ದೂರು ನೀಡುತ್ತಿದ್ದಾರೆ. ತಾವು ಇತ್ತೀಚೆಗೆ ಬೆಳ್ತಂಗಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂದು ಕೊರತೆಗಳ ಬಗ್ಗೆ ಅರಿತಿರುವಿರಿ. ಆದರೆ ಕೆಲವೊಂದು ಮುಖ್ಯವಾದ ಸಮಸ್ಯೆಗಳು ಇನ್ನೂ ಕೂಡ ಬಗೆಹರಿದಿಲ್ಲ ಎಂದು ರೋಗಿಗಳು ದೂರು ನೀಡಿರುತ್ತಾರೆ ಎಂದು ಬಂಗೇರರು ತಿಳಿಸಿದರು.

ಆದುದರಿಂದ ನ್ಯೂನತೆಗಳನ್ನು ಸರಿಪಡಿಸಿ ಸಂಬoಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕಾಗಿ ಅವರು ಸಚಿವರಲ್ಲಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಉದ್ಯಮಿ ರವಿಶಂಕರ ಶೆಟ್ಟಿ, ಬಡಾಜೆಗುತ್ತು ಮತ್ತು ಕೆ.ಪಿ.ಸಿ.ಸಿ ಕಾರ್ಯದರ್ಶಿ, ರಾಜ್ಯ ಅಲ್ಪ ಸಂಖ್ಯಾತ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ಅಶ್ವಿತ್ ಜೈನ್ ಉಪಸ್ಥಿತರಿದ್ದರು.

Related posts

ಮಾ.8: ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ, ಶ್ರೀ ಸರ್ವೇಶ್ವರೀ ದೇವಿಯ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ಪ್ರಕರಣ: ವಿಶೇಷ ತನಿಖಾ ತಂಡ ರಚಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ಪತ್ರ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya
error: Content is protected !!