July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ


ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರವು ಇತ್ತೀಚೆಗೆ ಸಮಾಪ್ತಿಗೊಂಡಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸರಕಾರಿ ಪ್ರೌಢಶಾಲೆ ಬದನಾಜೆ ಇದರ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಸೀತಾರಾಮ್ ಇವರು ವಿದ್ಯಾರ್ಥಿಗಳು ಸೇವೆಯ ಮೂಲಕ ಮುಖ್ಯ ವಾಹಿನಿಗೆ ಬರುವ ಪ್ರಯತ್ನವನ್ನು ಮಾಡಬೇಕು ಸೇವೆಯೇ ಜೀವನದ ಮೂಲವಾಗಿರಬೇಕು ಸೇವೆ ಮಾಡುವ ಮೂಲಕ ನಮ್ಮ ಜೀವನಕ್ಕೆ ಸಾರ್ಥಕತೆಯನ್ನು ಕೊಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಹೇಳಿದರು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಇದರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಲಿತ ಕುಮಾರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜನಾಜೆ ಇದರ ಎಸ್‌ಡಿಎಂಸಿ ಅಧ್ಯಕ್ಷ ಅನಿಲ್ ಡಿಸೋಜಾ, ಸರಕಾರಿ ಪ್ರೌಢಶಾಲೆ ಬದಾನಾಜೆ ಇದರ ಎಸ್‌ಡಿಎಂ ಸದಸ್ಯ ರಾಮಯ್ಯ ಗೌಡ ಮಾಚಾರು, ಆನಂದ ಗೌಡ , ಶ್ರೀಮತಿ ಭಾರತಿ , ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್ ಉಪಸ್ಥಿತರಿದ್ದರು.

ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಮುನಾ ಸಮರೋಪ ಭಾಷಣವನ್ನು ಮಾಡಿದರು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಬಿಎ ಬಿಎ ಶಮಿಉಲ್ಲಾ ಶಿಬಿರದ ಸಮಗ್ರ ವರದಿಯನ್ನು ವಾಚಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ನಾಯಕರಾದ ಕು. ಪ್ರತಿಕ್ಷ ,ಕು. ಜ್ಯೋತಿ, ಡುಂಡಿರಾಜ್ ವೀರೇಶ್ ಶಿಬಿರದ ಅನುಭವವನ್ನು ಹಂಚಿಕೊಂಡರು .ಕಾಲೇಜಿನ ಪ್ರಾಂಶುಪಾಲರಾದ ಡಾ. ಸವಿತಾ ಇವರು ಸ್ವಾಗತಿಸಿ ಶಿಬಿರಕ್ಕೆ ಸಹಕರಿಸಿದ ಎಲ್ಲರನ್ನು ಅಭಿನಂದಿಸಿದರು. ಸಹ ಶಿಬಿರಾಧಿಕಾರಿ ಸತೀಶ್ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಬಿರಾಧಿಕಾರಿ ಕುಮಾರಿ ಬಬಿತ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಶಿಬಾಜೆ : ಅರಂಪಾದೆಯಲ್ಲಿ ಕೃಷಿ ತೋಟವನ್ನು ಅರಣ್ಯ ಇಲಾಖೆಯವರು ತೆರವುಗೊಳಿಸಿದ ಹಿನ್ನೆಲೆ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ: ಆಕಸ್ಮಿಕ ಗ್ಯಾಸ್ ಸೋರಿಕೆ: ಸುಟ್ಟು ಕರಕಲಾದ ಅಡುಗೆ ಮನೆ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಜು.1ರಿಂದ ಗುರುವಾಯನಕೆರೆ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಬಂಪರ್ ಆಫರ್

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!