ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

ಬೆಳ್ತಂಗಡಿ: ತುಳುನಾಡ ಸಂಸ್ಕೃತಿಯಂತೆ ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಅ.13ರಂದು ಸಾಯಂಕಾಲ ನಟ ವಿಜಯರಾಘವೇಂದ್ರರವರ ಧರ್ಮಪತ್ನಿ ಸ್ಪಂದನ ರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ಜರಗಿತು.


ಈ ಕಾರ್ಯಕ್ರಮದಲ್ಲಿ ನಟ ವಿಜಯ ರಾಘವೇಂದ್ರ, ಶೌರ್ಯ ವಿಜಯ ರಾಘವೇಂದ್ರ, ಬಿಕೆ ಶಿವರಾಂ ಕುಟುಂಬಸ್ಥರು ಸುಪ್ರಸಿದ್ಧ ಸಿನೆಮಾ ನಿರ್ಮಾಪಕರಾದ ಸಿ.ಎಸ್.ಎ ಚಿನ್ನೆ ಗೌಡ, ಸ್ಪಂದನ ಅವರ ಸಹೋದರ ರಕ್ಷಿತ್ ಶಿವರಾಂ, ರಾಜು ಪೂಜಾರಿ ಕಾಶಿಪಟ್ನ, ನ್ಯಾಯವಾದಿ ಭಗೀರಥ ಜಿ. ಯೋಗೀಶ್ ಕುಮಾರ್ ನಡಕರ, ಗಂಗಾಧರ ಮಿತ್ತಮಾರು, ಸತೀಶ್ ಬಂಗೇರ ಕಾಶಿಪಟ್ನ, ನಾಗೇಶ್ ಗೌಡ, ಡಾ. ರಾಜಾರಾಮ್, ಸುಭಾಷ್ ರೈ, ರಮೇಶ ಬಂಗೇರ, ಪ್ರವೀಣ್ ಫೆರ್ನಾಂಡಿಸ್, ಜಯವಿಕ್ರಂ ಕಲ್ಲಾಪು, ತುಕಾರಾಮ ಬಂಗೇರ, ಚಂದ್ರಶೇಖರ ಪೂಜಾರಿ, ಜಗನ್ನಾಥ್ ಬಂಗೇರ, ಹೆರಾಜೆ ಕುಟುಂಬದ ಪೀತಾಂಬರ ಹೆರಾಜೆ, ಮಿತ್ರ ಹೆರಾಜೆ ಹಾಗೂ ನೂರಾರು ಕುಟುಂಬಸ್ಥರು ಹಾಗೂ ತಾಲೂಕಿನ ಗಣ್ಯರು ಹಾಜರಿದ್ದರು. ಶೇಖರ ಬಂಗೇರರವರ ನೇತೃತ್ವದಲ್ಲಿ, ಪ್ರಶಾಂತ್ ಕಾಂಡೆತ್ಯಾರು, ದಿನೇಶ್‌ರವರ ಸಹಕಾರದೊಂದಿಗೆ ಪೂಜಾ, ವಿಧಿ-ವಿಧಾನಗಳನ್ನು ನಡೆಸಲಾಯಿತು. ವರುಣದೇವರ ಕೃಪೆಯಿಂದ ಮಳೆಯ ಅವಾಂತರವಿಲ್ಲದೆ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.

Related posts

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!