ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

Updated on:

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಅ. 15 ರಂದು ಕರ್ನಾಟಕ ಸರ್ಕಾರದ ಕೃಷಿ ಮಂತ್ರಿ ಚೆಲುವರಾಯಸ್ವಾಮಿ ಕುಟುಂಬ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಕ್ಷೇತ್ರದ ವತಿಯಿಂದ ಚೆಲುವರಾಯಸ್ವಾಮಿ ರವರನ್ನು ಅರ್ಚಕರು ಶಾಲು ಹೊದಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಕೊಕ್ಕಡ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ಸುಬ್ರಮಣ್ಯ ಶಬರಾಯ ,ಚಾರ್ಮಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೊಕ್ಕಡ ಕೃಷಿ ಪತ್ತಿನ ಸದಸ್ಯರಾದ ವಿಶ್ವನಾಥ ಕೊಲ್ಲಜೆ, ಕೃಷಿ ಪತ್ತಿನ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ ,ಸುದಾ ನಾಗೇಶ್ , ಯಶೋಧರ ಚಾರ್ಮಾಡಿ, ಕೆಂ ಎಂ ನಾಗೇಶ್ ಕುಮಾರ್ ಗೌಡ ಅಭಿಮಾನಿ ಬಳಗದ ಸದಸ್ಯರಾದ ಉಮೇಶ್ ಬಂಗೇರ, ಗಣೇಶ್, ಕಾಶಿ, ದಯನಿಷ್ ಗೌಡ ,ಹರಿಶ್ಚಂದ್ರ, ಅಶ್ವಿನ್ ಕಿರಣ್ ,ಆಚುತ್ತ ನಾಯ್ಕ, ಗಣೇಶ್ ಪಿಜಿನಡ್ಕ, ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಕ್ಷೇತ್ರದ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!