25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಕ್ರಮ ಇಸ್ಪೀಟ್ ಅಡ್ಡೆಗೆ ಪೊಲೀಸ್ ದಾಳಿ : ರೂ. 54 ಸಾವಿರ ನಗದು ಸಹಿತ 37 ಮಂದಿ ವಶ

ಮಡಂತ್ಯಾರು: ಅ.14 ರಂದು ರಾತ್ರಿ ಮಾಲಾಡಿ ಗ್ರಾಮದ, ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದಲ್ಲಿರುವ ಎಂ.ಆರ್‌ ರೀಕ್ರಿಯೇಷನ್‌ ಕ್ಲಬ್‌ ನ ಹಿಂಬಾಗದಲ್ಲಿ, ತಗಡು ಶೀಟ್‌ ಛಾವಣಿಯ ಶೆಡ್‌ ನ ಒಳಗೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್‌-ಬಹಾರ್‌ ) ಎಂಬ ಅದೃಷ್ಟದ ಆಟವನ್ನು ಆಡುತ್ತಿದ್ದಾಗ, ಪುಂಜಾಲಕಟ್ಟೆ ಪೊಲೀಸ್‌ ಉಪ ನಿರೀಕ್ಷಕರು ಹಾಗು ಸಿಬ್ಬಂದಿಗಳು ಸ್ಥಳಕ್ಕೆ ದಾಳಿ ನಡೆಸಿದರು.

ಈ ವೇಳೆ ಒಬ್ಬ ವ್ಯಕ್ತಿಯು ಪರಾರಿಯಾಗಿದ್ದು, ಉಳಿದ 37 ಮಂದಿ ಆರೋಪಿಗಳನ್ನು ಮತ್ತು ಸ್ಥಳದಲ್ಲಿ ಇದ್ದ ಆಟಕ್ಕೆ ಉಪಯೋಗಿಸಿದ ಇಸ್ಪಿಟ್ ಎಲೆಗಳು, ನಗದು ರೂ 54,510/- , ಉಪಯೋಗಿಸಿದ ಪಿಠೋಪಕರಣಗಳು, 4 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು, ನ್ಯಾಯಾಲಯದ ಅನುಮತಿ ಪಡೆದು ಅ. 16 ರಂದು ಪುಂಜಾಲಕಟ್ಟೆ ಠಾಣೆಯಲ್ಲಿ ಅ.ಕ್ರ: 91/2023 ಕಲಂ: ಕಲಂ: 79, 80 ಕರ್ನಾಟಕ ಪೊಲೀಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಜ.1: ಜೆಸಿಐ ಕೊಕ್ಕಡ ಕಪಿಲ ಘಟಕದ ನೂತನ ಅಧ್ಯಕ್ಷರ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಜು.13: ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ (ಆಟಿ) ಸೇಲ್: 10% ಫ್ಲ್ಯಾಟ್, 50-50 ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

Suddi Udaya

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಬ್ಲಾಕ್ ಜಾಕ್ ಪ್ರೊಡಕ್ಟ್ ಪಿಚ್ಚಿಂಗ್ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya
error: Content is protected !!